ಎಸ್‌ಡಿಎಂ ಕಾಲೇಜು ಉಜಿರೆ: ವಾರ್ಷಿಕ ವಿಶೇಷ ಶಿಬಿರಕ್ಕೆ ತಯಾರಿ

Upayuktha
0







ಪರ್ಲಾಣಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ 2022-23ನೇ ಸಾಲಿನ ಶಿಬಿರ ಮಾರ್ಚ್ 30 ರಿಂದ ಏಪ್ರಿಲ್ 05ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರ್ಲಾಣಿಯಲ್ಲಿ ಒಂದು ದಿನದ ಮುಂಚಿತವಾಗಿ ಎಲ್ಲಾ ಸ್ವಯಂಸೇವಕರು ಹಾಗೂ ಗ್ರಾಮಸ್ಥರ ಸಹಕಾರದಿಂದ ಶಿಬಿರದಲ್ಲಿ ಪೂರ್ವಭಾವಿ ಸಿದ್ಧತೆಗಳು ಬುಧವಾರದಂದು ನಡೆಯಿತು.


ವಿಶೇಷವೆಂದರೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿಯ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಪುತ್ತಿಲ ಅವರ  ಸಹಾಯದಿಂದ ನೈಸರ್ಗಿಕವಾಗಿ ಭವ್ಯವಾದ ವೇದಿಕೆ ತಯಾರುಗೊಂಡಿತು. ಸ್ವಯಂಸೇವಕರ ವತಿಯಿಂದ ಶಾಲೆಯ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.ಇನ್ನು ಈ ಶಿಬಿರದಲ್ಲಿ ಮುಖ್ಯವಾಗಿ ಗಮನಿಸಬೇಕಾದದ್ದು ಸ್ವಯಂಸೇವಕರ ಆರೋಗ್ಯದ ಹಿತ ದೃಷ್ಟಿಯಿಂದ ಗಂಟೆಗೆ ಒಮ್ಮೆ ನೀರು ಕುಡಿಯುವ ವ್ಯವಸ್ಥೆ ಮಾಡಲಾಗಿದ್ದು, ಈ ವ್ಯವಸ್ಥೆಯು ಸತತವಾಗಿ ಒಂದು ವಾರಗಳ ಕಾಲ ಮುಂದುವರಿಯಲಿದೆ.


ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ತಮ್ಮಯ್ಯ ಬಿ. ಮತ್ತು ಶ್ರೀಮತಿ ಶಾಂತಿ ಡಿಸೋಜ ಹಾಗೂ ಇತರ ಶಿಕ್ಷಕರ ಸಹಕಾರದಿಂದ ಶಿಬಿರದ ಪೂರ್ವಭಾವಿ ಸಿದ್ಧತೆಗಳು ಕ್ರಮಬದ್ಧವಾಗಿ ನೆರವೇರಿದವು. ಎನ್ಎಸ್ಎಸ್ ನ ಯೋಜನಾಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಮತ್ತು ಶ್ರೀಮತಿ ದೀಪಾ ಆರ್. ಪಿ ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top