ಡಾ.ಎನ್ಎಸ್ಎಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆ

Upayuktha
0

ನಿಟ್ಟೆ: ವಿದ್ಯಾರ್ಥಿಗಳು ಇಂದು ಹಣ, ಮೊಬೈಲ್, ಸಾಮಾಜಿಕ ಜಾಲತಾಣ ಮತ್ತು ಮೋಟರ್ ಬೈಕ್ ನ ಹಿಂದೆ ಬಿದ್ದಿದ್ದು ಈ ನಾಲ್ಕು ಸಂಗತಿಗಳು ವಿದ್ಯಾರ್ಥಿಗಳ ಮೇಲೆ ಬಹಳ‌ಷ್ಟು ಪ್ರಭಾವವನ್ನು ಬೀರಿವೆ. ಈ ಕುರಿತು ಪೋಷಕರು ಹಾಗೂ ಶಿಕ್ಷಕರು ಮರುಯೋಚಿಸಿ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಎ.ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ. ಭಂಡಾರಿ ಅಭಿಪ್ರಾಯಪಟ್ಟರು.


ಇವರು ಇತ್ತೀಚೆಗೆ ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ ನಂತರದ ಹದಿಹರೆಯದ ವಿದ್ಯಾರ್ಥಿಗಳ ಮನಸ್ಥಿತಿ ಬದಲಾಗಿದ್ದು ವಿದ್ಯಾರ್ಥಿಗಳು ತಮ್ಮನ್ನು ತಾವು ಶಿಕ್ಷಣದಲ್ಲಿ ಆಸಕ್ತಿ ಉಳ್ಳವರು ಎಂದು ಸಾಬೀತುಪಡಿಸಿಕೊಳ್ಳುವ ಒತ್ತಡಕ್ಕೆ ಒಳಗಾಗಿದ್ದಾರೆ. ಹೀಗಾಗಿ ಪೋಷಕರು ಮಕ್ಕಳ ಈ ಒತ್ತಡಗಳ ಕುರಿತು ಅರಿತುಕೊಳ್ಳುವ, ಅರಗಿಸಿಕೊಳ್ಳುವ, ಸಮಸ್ಯೆಯನ್ನು ವಿವರವಾಗಿ ವಿವೇಚಿಸುವ ಹಾಗೂ ಮಕ್ಕಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು ಎಂದು ಪೋಷಕರಿಗೆ ಕಿವಿ ಮಾತು ಹೇಳಿದರು.

ನಿಟ್ಟೆ ಕ್ಯಾಂಪಸ್ ನ ಆಪ್ತ ಸಮಾಲೋಚಕರಾದ ಶ್ರೀ ಅಂಕಿತ್ ಕುಮಾರ್ ಮಾತನಾಡಿ ಆಪ್ತ ಸಮಾಲೋಚನೆಯ ಮಹತ್ವವನ್ನು ಪೋಷಕರಿಗೆ ವಿವರಿಸಿದರು. ತಂದೆ-ತಾಯಿ, ಪೋಷಕರು ತಮ್ಮ ಮಕ್ಕಳ ಇಂಗಿತಗಳನ್ನು ಅರ್ಥೈಸಿಕೊಳ್ಳಬೇಕು ಮತ್ತು ಮಕ್ಕಳ ಕುರಿತ ಮಾಹಿತಿ ಅಪ್ತ ಸಮಾಲೋಚಕರು, ಸ್ನೇಹಿತರುಗಳಿಗಿಂತ ಹೆಚ್ಚು ಪೋಷಕರಿಗೆ ತಿಳಿದಿರಬೇಕು. ಆಗ ಮಾತ್ರವೇ ಮಕ್ಕಳು ಸರಿಯಾದ ಮಾರ್ಗದಲ್ಲಿ ಸಾಗಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾಕುಮಾರಿ. ಬಿ.ಕೆ ಅವರು, ವಿದ್ಯಾರ್ಥಿಗಳ ಅಭ್ಯುದಯಕ್ಕೆ ತಂದೆ –ತಾಯಿ ತಮ್ಮ ಸಮಯವನ್ನು ಮೀಸಲಿರಿಸಬೇಕಾದ ಅನಿವಾರ್ಯತೆಯ ಕುರಿತು ವಿವರಿಸಿದರು. 

ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಉಮಾ ಉಪಾಧ್ಯಾಯ ಉಪಸ್ಥಿತರಿದ್ದರು.
ಐಕ್ಯೂಎಸಿ ಸಂಯೋಜಕರಾದ ಶ್ರೀ ಪ್ರಕಾಶ್ ಬಿ. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಮೇಶ್ ಎಂ ವಂದಿಸಿದರು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ  ಉಪನ್ಯಾಸಕಿ ಶ್ರೀಮತಿ ನಿಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top