ಬದಿಯಡ್ಕ: ಮಾನ್ಯ ಕೆಂಪುಕಲ್ಲು ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವು ಏಪ್ರಿಲ್ ೮ ಶನಿವಾರದಂದು ಮಾನ್ಯದ ಶಾಲಾ ಮೈದಾನದಲ್ಲಿ ನಡೆಯಲಿರುವುದು. ರಾತ್ರಿ ೮ ಗಂಟೆಗೆ ಏಷ್ಯನ್ ಗೇಮ್ ಗೋಲ್ಡ್ ಮೆಡಲಿಸ್ಟ್, ಪ್ರೊ ಕಬಡ್ಡಿ ತರಬೇತುದಾರ ಜಗದೀಶ್ ಕುಂಬಳೆ ಪಂದ್ಯಾಟವನ್ನು ಉದ್ಘಾಟಿಸಲಿರುವರು.
ಇದೇ ಸಂದರ್ಭದಲ್ಲಿ ಕೆಂಪು ಕಲ್ಲು ವಲಯದ ಹಿರಿಯ ಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ ಜರಗಲಿರುವುದು. ಸೀಮಿತ ತಂಡಗಳು ಭಾಗವಹಿಸುವ ಈ ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ರೂ ೩೦,೦೩೦/- ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ ೧೫,೦೧೫/- ಮತ್ತು ಟ್ರೋಪಿ, ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ರೂ ೫೦೫೦/- ಹಾಗೂ ಟ್ರೋಫಿ ನೀಡಲಾಗುವುದು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ