ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಯಲ್ಲಿ ವಿದ್ಯಾರ್ಥಿಗಳಿಗೆ “ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ” (Artificial intelligence and data science) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್ಡಿಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ Digital literacy ಕಾರ್ಯಕ್ರಮದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ” (Artificial intelligence and data science) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಬಿಬಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಗಿತ್ತು.
ಉಪನ್ಯಾಸ ಕಾರ್ಯಕ್ರಮದಲ್ಲಿ ಒಟ್ಟು 62 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದು ಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಕೃತಕ ಬುದ್ಧಿವಂತಿಕೆ ವಿಭಾಗ ಎಸ್ಡಿಎಂ ತಾಂತ್ರಿಕ ಮಹಾವಿದ್ಯಾಲಯ,
(SDMIT )ಉಜಿರೆಯಲ್ಲಿ ವಿಭಾಗವರಿಷ್ಠರಾಗಿರುವ ಡಾ. ತ್ಯಾಗರಾಜ್, ರವರು ವಿದಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ಆಧಾರಿ ತಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶದ ಕುರಿತು ಮಾಹಿತಿ ನೀಡುವದರ ಜೊತೆಗೆ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ಕ್ಷೇತ್ರ ಭವಿಷ್ಯದಲ್ಲಿ ಸಮಾಜಕ್ಕೆ ಹೇಗೆ ಪ್ರಯೋಜನಕಾರಿ ಎಂಬ ವಿಷಯದ ಕುರಿರು ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ. B.A ಕುಮಾರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಹರೀಶ ಶೆಟ್ಟಿ ಯವರ ತಂಡವು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ