ಸೌಹಾರ್ದತೆ, ಸಮಾನತೆ ಮತ್ತು ಸಹೋದರತ್ವದ ಸಾಕಾರ ಮೂರ್ತಿ ಡಾ: ಬಿ.ಆರ್.ಅಂಬೇಡ್ಕರ್ : ಡಾ. ಚೂಂತಾರು

Upayuktha
0

 

ಮಂಗಳೂರು: ದಿನಾಂಕ 14-04-2023 ನೇ ಶುಕ್ರವಾರದಂದು ಶ್ರೀ ಭಾರತೀ ಕಾಲೇಜು, ನಂತೂರು, ಮಂಗಳೂರು ಇಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ, ಮಹಾಮಾನವತಾವಾದಿ ಡಾ. ಬಿ.ಆರ್.ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. 


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ತಮ್ಮ ಜೀವನದುದ್ದಕ್ಕೂ ವರ್ಗ ಅಸಮಾನತೆ, ಜಾತಿ ಅಸಮಾನತೆ ಮತ್ತು ಲಿಂಗ ಅಸಮಾನತೆಯನ್ನು ಹೊಡೆದೋಡಿಸಿದ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಸಿದ್ದಾಂತಗಳನ್ನು ಭಾರತೀಯರ ಮನೆ ಮನಗಳಲ್ಲಿ ಆಳವಾಗಿ ಬೇರೂರಿದೆ. ನಮ್ಮ ಸಂವಿಧಾನದ ಶಿಲ್ಪಿ ಶ್ರೀ ಬಾಬಾ ಸಾಹೇಬ ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆದುಕೊಂಡು ಅವರ ಆಶಯದಂತೆ ದಲಿತ, ದಮನಿತ ಮತ್ತು ಶ್ರಮಜೀವಿ ಸಮುದಾಯದ ಜನರನ್ನು ಗುರುತಿಸಿ, ಗೌರವಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿಕೊಂಡಾಗ ಮಾತ್ರ ಅಂಬೇಡ್ಕರ್ ಜಯಂತಿಯ ಆಚರಣೆಗೆ ಹೆಚ್ಚಿನ ಮೌಲ್ಯ ಬರುತ್ತದೆ ಎಂದರು. 


ಈ ಸಂಧರ್ಭದಲ್ಲಿ ಉಪ ಸಮಾದೇಷ್ಟರಾದ ಶ್ರೀ ರಮೇಶ್, ಬೆಂಗಳೂರು ಅಕಾಡೆಮಿಯ ಭೋದಕರಾದ ಶ್ರೀ ಚಂದನ್ ಆರ್, ಹಿರಿಯ ಗೃಹರಕ್ಷಕರಾದ ಸುನಿಲ್, ಸುನಿಲ್ ಪೂಜಾರಿ, ರೇವತಿ ದಿನೇಶ್ ಹಾಗೂ 50 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top