ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಯಲ್ಲಿ ವಿಹಾರ ಕಲಿಕೆ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಂಶೆಯಲ್ಲಿರುವ ಟೀ ಮತ್ತು ಕಾಫೀ ತೋಟಕ್ಕೆ ಭೇಟಿ ನೀಡಿ ಟೀ ಮತ್ತು ಕಾಫಿಯ ವಿವಿಧ ತಳಿಗಳು ಮತ್ತು ಅವುಗಳ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಟೀ ಮತ್ತು ಕಾಫೀ ತೋಟದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ನೀಡಿದ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ವಿವರ ನೀಡಿ ಕಾರ್ಮಿಕರ ಕೊರತೆ ನಿವಾರಿಸಲು ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಮತ್ತು ಕಾರ್ಮಿಕರಿಗೆ ಜಾಗ್ರತಿ ಮೂಡಿಸುವ ಕಾರ್ಯಕ್ರಮ ವಿದ್ಯಾರ್ಥಿಗಳು ಹಮ್ಮಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮಾಣಿಕ್ಯ ರಾಜ್ ಮತ್ತು ಸುಕುಮಾರ ಜೈನರವರು ಮಾರ್ಗದರ್ಶನ ನೀಡಿದರು. ತೋಟಗಾರಿಕಾ ಬೆಳೆಗೆಳು ಭವಿಷ್ಯದಲ್ಲಿ ಆರ್ಥಿಕತೆಗೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೇಗೆ ಪ್ರಯೋಜನಕಾರಿ ಎಂಬ ವಿಷಯದ ಕುರಿತು ಮನವರಿಕೆ ಮಾಡಿಕೊಟ್ಟರು.
ಜೀವ ವೈವಿಧ್ಯತೆಗಳ ಕುರಿತು ಸಮೀಕ್ಷೆ:
ಕುದುರೆಮುಖದಲ್ಲಿ ಇರುವ ಲಕ್ಯ ಅಣೆಕಟ್ಟುನ ಸುತ್ತಲಿನ ಪರಿಸರದಲ್ಲಿ ಜೀವ ವೈವಿಧ್ಯತೆಗಳ ಕುರಿತು ಸಮೀಕ್ಷೆ ನಡೆಸಿದ ವಿದ್ಯಾರ್ಥಿಗಳು ಈ ಪರಿಸರದಲ್ಲಿನ ಜೀವ ವೈವಿಧ್ಯತೆಗಳ ರಕ್ಷಣೆ ಕುರಿತು ಸರಕಾರ ಕೈಗೊಂಡಿರುವ ಕ್ರಮಗಳು, ಪ್ರಾಣಿಗಳ ಗಣತಿ ಕಾರ್ಯಗಳಲ್ಲಿ ಅನುಸರಿಸುವ ವೈಜ್ಞಾನಿಕ ಕ್ರಮಗಳ ಬಗ್ಗೆ ಮತ್ತು ಕಾಡ್ಗಿಚ್ಚು ಸಂದರ್ಭದಲ್ಲಿ ಕೈಗೊಂಡ ಕ್ರಮಗಳ ಕುರಿತು ವಿವರ ಪಡಕೊಂಡರು.
ಪರಿಸರ ರಕ್ಷಣೆ, ಮತ್ತು ಗ್ರಾಮ ಅರಣ್ಯ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ವಿದ್ಯಾರ್ಥಿಗಳು ಹಮ್ಮಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿ ಮಹಮೂದ್ ಮೆಹಬೂಬ್ ರವರು ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಡಾ.ಯುವರಾಜ್ ಮತ್ತು ಅಭಿನಂದನ್ ಜೈನ್ ಅವರ ತಂಡವು ಯಶಸ್ವಿಯಾಗಿ ವಿಹಾರ ಕಲಿಕೆ ಕಾರ್ಯಕ್ರಮವನ್ನು ಸಂಘಟಿಸಿ ನಿರ್ವಹಣೆ ಮಾಡಿತು. ವಿಭಾಗ ವರಿಷ್ಠ ಡಾ. ಗಣರಾಜ್ ಕೆ ಎಲ್ಲ ರೀತಿಯ ಸಹಕಾರ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ