ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 05-04-2023ನೇ ಬುಧವಾರದಂದು ಜರುಗಿತು. ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬರುವ ವಿಧಾನ ಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಬಗ್ಗೆ ಚರ್ಚಿಸಲಾಯಿತು. ಗೃಹರಕ್ಷಕರ ಕ್ಷೇಮಾಭಿವೃದ್ದಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರ ಬಗ್ಗೆ ಚರ್ಚಿಸಲಾಯಿತು. ಮೂರು ವರ್ಷಗಳನ್ನು ಮೀರಿದ ಗೃಹರಕ್ಷಕರು ನವೀಕರಣ ಮಾಡಿಸಲು ಸೂಚಿಸಲಾಯಿತು.
ಉಪಸಮಾದೇಷ್ಟರಾದ ರಮೇಶ್ ಅವರು ಸ್ವಾಗತ ಭಾಷಣ ಮಾಡಿದರು. ಕಛೇರಿಯ ಅಧೀಕ್ಷಕಿ ಶ್ರೀಮತಿ ಕವಿತಾ ಕೆ.ಸಿ ಮತ್ತು ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 15 ಘಟಕಗಳ ಘಟಕಾಧಿಕಾರಿಗಳಾದ ಮಾರ್ಕ್ಶೇರ್, ಸೀನಿಯರ್ ಪ್ಲಟೂನ್ ಕಮಾಂಡರ್, ಮಂಗಳೂರು ಘಟಕ, ಐತಪ್ಪ, ಘಟಕಾಧಿಕಾರಿ, ಬಂಟ್ವಾಳ ಘಟಕ, ತೀರ್ಥೇಶ್ ಘಟಕಾಧಿಕಾರಿ ಕಡಬ ಘಟಕ, ಪ್ರಭಾರ ಘಟಕಾಧಿಕಾರಿಗಳಾದ ಎಂ. ಭಾಸ್ಕರ್, ಉಳ್ಳಾಲ ಘಟಕ, ಶಿವಪ್ಪ ನಾಯ್ಕ್, ಪಣಂಬೂರು ಘಟಕ, ಲೋಕೇಶ್, ಮೂಲ್ಕಿ ಘಟಕ, ದಿನೇಶ್ ಉಪ್ಪಿನಂಗಡಿ ಘಟಕ, ರಮೇಶ್ ಸುರತ್ಕಲ್ ಘಟಕ, ಸಂಜೀವ, ವಿಟ್ಲ ಘಟಕ, ಗಿರಿಧರ್, ಸುಳ್ಯ ಘಟಕ, ವಸಂತ ಕುಮಾರ್, ಬೆಳ್ಳಾರೆ ಘಟಕ, ಹರಿಶ್ಚಂದ್ರ ಸುಬ್ರಹ್ಮಣ್ಯ ಘಟಕ, ಸೆಕ್ಷನ್ ಲೀಡರ್ ಜಗನ್ನಾಥ್ ಪುತ್ತೂರು ಘಟಕ, ಲಾರೆನ್ಸ್ ಡಿ’ಸೋಜಾ ಮೂಡಬಿದ್ರೆ ಘಟಕ, ಚಾಕೋ ಕೆ.ಜೆ ಬೆಳ್ತಂಗಡಿ ಘಟಕ ಗೃಹರಕ್ಷಕರಾದ ಗಿರೀಶ್ ಕುಮಾರ್ ಸುಬ್ರಹ್ಮಣ್ಯ ಘಟಕ ಇವರುಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ