ಸ್ಥಳೀಯ ಪ್ರತಿಭೆಗಳು, ಸಾಧಕರಿಗೆ ಅವಕಾಶ: ಪುತ್ತೂರು ಉಮೇಶ್ ನಾಯಕ್
ಪುತ್ತೂರು: ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ ಸಾಧಕರನ್ನು ಸನ್ಮಾನಿಸಲು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನು ಗುರುತಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಭಾಧ್ಯಕ್ಷತೆ ವಹಿಸಿದ ಪುತ್ತೂರು ಕಸಾಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ತಿಳಿಸಿದರು.
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕಬಕ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕ ಇವರ ಸಂಯೋಜನೆಯಲ್ಲಿ ಹಾಗೂ ಮಿತ್ರಂಪಾಡಿ ಜಯರಾಮ್ ರೈ ಅವರ ಮಹಾಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷವಾಕ್ಯದಲ್ಲಿ ನಡೆಯುವ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ ಕಾರ್ಯಕ್ರಮವು ಕಬಕ ಗ್ರಾಮದ ಗೌಡ ಸಮುದಾಯಭವನ ಮುರದಲ್ಲಿ ಮಾರ್ಚ್ 30,ರಂದು ನಡೆಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಯುವ ಈ ಕಾರ್ಯಕ್ರಮ ಕಬಕ ಗ್ರಾಮದಲ್ಲಿ ನಡೆಯುವುದು ಅತ್ಯಂತ ಸಂತೋಷದ ಸಂಗತಿ ಇದರಿಂದ ಸ್ಥಳೀಯ ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ತೊಡಗಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಕಬಕ ಗ್ರಾಮಪಂಚಾಯತ್ ಪಿಡಿಓ ಆಶಾ.ಇ. ಅವರು ಶುಭ ಹಾರೈಸಿದರು.
ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ. ಶ್ರೀಶ ಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ, ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಡಾ.ಸುರೇಶ ನೆಗಳಗುಳಿ, ಗೌರವಾಧ್ಯಕ್ಷ ಜಯಾನಂದ ಪೆರಾಜೆ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ಡಾ. ಹರ್ಷಕುಮಾರ್ ರೈ ಮಾಡಾವು, ಎಂ.ಪಿ.ಅಬೂಬಕರ್. ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಹಾಜಿ ಅಬೂಬಕರ್ ಆರ್ಲಪದವು, ಆಶಾ ಇ. ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಕಬಕ ಉಪಸ್ಥಿತರಿದ್ದರು.
ಶಿಕ್ಷಣ ಇಲಾಖೆಯಲ್ಲಿ ದಕ್ಷ ಪ್ರಾಮಾಣಿಕವಾಗಿ ಸೇವೆಯನ್ನು ನೀಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್.ಆರ್ ಅವರಿಗೆ ಗಡಿನಾಡಭೂಷಣ ರಾಜ್ಯ ಪ್ರಶಸ್ತಿಯನ್ನು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಡಾ ಅಬೂಬ್ಬಕರ್ ಆರ್ಲಪದವು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್, ಹಿರಿಯ ಸಾಹಿತಿಗಳಾದ ನಾರಾಯಣ ರೈ ಕುಕ್ಕುವಳ್ಳಿ, ಡಾ.ಶ್ರೀಧರ್ ಎಚ್. ಜಿ. ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕೃತಿ ಬಿಡುಗಡೆ ಎಂ.ಪಿ.ಎಂ. ವಿದ್ಯಾಲಯ ಸಂಚಾಲಕರಾದ ಎಂ.ಪಿ ಅಬೂಬಕ್ಕರ್ ಅವರ ನೆನಪಿರಲಿ ಎಂಬ ಕೃತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್. ಅವರು ಬಿಡುಗಡೆಗೊಳಿಸಿದರು.
ಗೌಡ ಸಮುದಾಯ ಭವನದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣ ಗೌಡರವರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷೆ ಶಾಂತಾ ಪುತ್ತೂರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಆನಂದ ರೈ ಅಡ್ಕಸ್ಥಳ ಧನ್ಯವಾದವಿತ್ತರು. ಕು. ಅಪೂರ್ವ ಕಾರಂತ್, ಕುಮಾರಿ ಸೌಜನ್ಯ ಬಿಎಂ, ಜಯರಾಮ್ ಪಡ್ರೆ ವಿವಿಧ ಗೋಷ್ಠಿಗಳನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ