ಮೆದುಳಿಗೆ ಮೇವು, ಸಕಾರಾತ್ಮಕ ಯೋಚನೆಯಿಂದ ಕ್ರಿಯಾಶೀಲತೆ ವೃದ್ಧಿ: ಅಪೂರ್ವ ಕಾರಂತ್

Upayuktha
0

ನೆಕ್ಕಿಲಾಡಿ ರಾಮಕೃಷ್ಣ ಆಶ್ರಮದಲ್ಲಿ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕದ ಎರಡನೇ ಕಾರ್ಯಕ್ರಮ


ಪುತ್ತೂರು: ಮೆದುಳಿಗೆ ನಾವು ಕೊಡುವ ಸಂದೇಶ ಹಾಗೂ ಆಲೋಚನೆಯ ಮೇಲೆ ಮೆದುಳಿನ ಸಾಮರ್ಥ್ಯ ನಿಂತಿದೆ, ಒಳಗಿರುವ ಕಸವನ್ನು ಹೊರಗೆ ಹಾಕಿ ಊಹೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಾರ್ಯಾಗಾರದಲ್ಲಿ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷೆ ಅಪೂರ್ವ ಕಾರಂತ್ ಅಭಿವ್ಯಕ್ತಿಸಿದರು.


ನೆಕ್ಕಿಲಾಡಿ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ನಡೆದ ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ಸಾಹಿತ್ಯ ರಚನೆ ಕಾರ್ಯಾಗಾರದಲ್ಲಿ ಮಾತನಾಡಿದರು.


ಸಕಾರಾತ್ಮಕ ಊಹೆಯನ್ನು ಮಾಡಿಕೊಳ್ಳುವ ಉಪಯೋಗ, ಕ್ರಿಸ್ಟಲ್ ಬಾಲ್ ಪವರ್ ಟೆಕ್ನಿಕ್, ಓದಿನ ವಿಧಾನ, ಪರೀಕ್ಷಾ ಭಯ ಹೋಗಲಾಡಿಸುವಿಕೆ, ಸ್ಮರಣ ಶಕ್ತಿ ವಿಷಯಗಳ ಕುರಿತು ಮಾತನಾಡಿ ಅನೇಕ ಪ್ರಶ್ನೆಗಳ ಮೂಲಕ ಕಾರ್ಯಾಗಾರದಲ್ಲಿ ಮಕ್ಕಳನ್ನು ತೊಡಗಿಸಿದರು.


ಸಾಹಿತ್ಯ ರಚನೆಯ ಮಹತ್ವ ತಿಳಿಸುತ್ತಾ ಎಲ್ಲರಲ್ಲೂ ಆ ಕೂಡಲೇ ಚುಟುಕು ರಚಿಸಲು ಪ್ರೇರೇಪಿಸಿದರು. 10 ಮಕ್ಕಳ ಚುಟುಕು ಬಹಳ ಚೆನ್ನಾಗಿ ರಚಿತವಾಗಿದೆ ಎಂದು ಅಪೂರ್ವ ಕಾರಂತ್ ಮೆಚ್ಚುಗೆ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top