ಎಸ್‍ಸಿಡಿಸಿಸಿ ಬ್ಯಾಂಕ್‌ಗೆ 61.38 ಕೋಟಿ ರೂ ದಾಖಲೆಯ ಲಾಭ

Upayuktha
0

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ಆರ್  ಅವರಿಂದ ವಾರ್ಷಿಕ ವರದಿ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಅಭಿವೃದ್ಧಿಯ ಮುಂಚೂಣಿಯಲ್ಲಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 111 ಶಾಖೆಗಳ ಮೂಲಕ ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್‍ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದ್ದು ಕಳೆದ ಆರ್ಥಿಕ ವರ್ಷದಲ್ಲಿ 61.38 ಕೋಟಿ ರೂ.ಗಳ ದಾಖಲೆ ಪ್ರಮಾಣದ ಲಾಭ ಗಳಿಸಿದೆ.


ರೂ.61.38 ಕೋಟಿ ದಾಖಲೆಯ ಲಾಭ ಗಳಿಕೆ

109 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್‍ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2023ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್‍ ರೂ 61.38 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ. 50.49 ಕೋಟಿ) ಕ್ಕಿಂತ ಶೇಕಡಾ21.57 ಏರಿಕೆಯಾಗಿದೆ. ಇದು ಎಸ್‍ಸಿಡಿಸಿಸಿ ಬ್ಯಾಂಕ್‍ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ. 


ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿರೂ 13,512 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ 16.40 ಏರಿಕೆಯನ್ನು ಕಂಡಿದೆ.2023-24ನೇ ಸಾಲಿಗೆ ರೂ 15,000 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.


ರೂ.6,368.50. ಕೋಟಿ ಠೇವಣಿ

ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‍ಗಳಲ್ಲೂ ತೀವ್ರ ಸ್ಪರ್ಧೆ ಇದೆ.ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್‍ ತನ್ನ 111 ಶಾಖೆಗಳ ಮುಖಾಂತರ ಒಟ್ಟು ರೂ 6,368.50 ಕೋಟಿ ರೂ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಎಸ್‍ಸಿಡಿಸಿಸಿ ಬ್ಯಾಂಕ್‍ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ 12.69 ಏರಿಕೆಯಾಗಿದೆ.


ರೂ 5,695.55 ಕೋಟಿ ಮುಂಗಡ

ಬ್ಯಾಂಕ್‍ ಸ್ಪರ್ಧಾತ್ಮಕ ವ್ಯವಹಾರದಲ್ಲಿ ರೂ 5,695.55.ಕೋಟಿ ವರದಿ ವರ್ಷದಲ್ಲಿ ಮುಂಗಡ ನೀಡಿದೆ. ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ 1,681.46 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ 150.20 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ 1,831.66 ಕೋಟಿ ರೂಪಾಯಿ ಸಾಲ ನೀಡಲಾಗಿದೆ.ಕೃಷಿಯೇತರ  ಸಾಲವಾಗಿ ರೂ 3,863.89 ಕೋಟಿ ಸಾಲ ನೀಡಿದ್ದು ಪ್ರಸಕ್ತ ಸಾಲಿನಲ್ಲಿಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ 7,143.38 ಕೋಟಿಯಾಗಿರುತ್ತದೆ.ಕಳೆದ ವರ್ಷದ ಹೊರಬಾಕಿ ಸಾಲ ರೂ.5,956.87 ಕೋಟಿಯಾಗಿದ್ದು ಕಳೆದ ಸಾಲಿಗಿಂತ ಶೇ 19.92 ಏರಿಕೆಯಾಗಿರುತ್ತದೆ.


ಸತತ 28 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 28ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. 


ಬ್ಯಾಂಕಿನ ಆರ್ಥಿಕ ತಖ್ತೆ

ಬ್ಯಾಂಕ್‍ಗೆ ಒಟ್ಟು1,054 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ 268.64ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ 9,859.10 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ 8,668.90 ಕೋಟಿ) ಶೇಕಡ  13.73% ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ 240.79ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 4.54% ರಷ್ಟು ಏರಿಕೆ ಕಂಡಿದೆ


“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‍ನ್ನು ನೀಡಿದೆ. ಈಗಾಗಲೇ 1,32,291 ರುಪೇ ಕಿಸಾನ್ ಕಾರ್ಡ್‍ಗಳನ್ನು ರೈತರಿಗೆ ವಿತರಿಸಲಾಗಿದೆ. 72,298 ರುಪೇ ಡೆಬಿಟ್ ಕಾರ್ಡ್‍ಗಳನ್ನು ಬ್ಯಾಂಕ್‍ನ ಇತರ ಗ್ರಾಹಕರಿಗೆ ನೀಡಲಾಗಿದೆ.


ಮುಂದಿನ ಯೋಜನೆಗಳು

15 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 15 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ.

ಪ್ರತೀ ತಾಲೂಕಿಗೆ ಎಟಿಎಂ ಅಳವಡಿಕೆ :ಈಗಾಗಲೇ 3 ತಾಲೂಕಿನ ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು ಮುಂದೆ ಉಳಿದ 13 ತಾಲೂಕಿನ ಮುಖ್ಯ ಶಾಖೆಗಳಲ್ಲಿ  ಎಟಿಎಂ ಅಳವಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.


ಇಮೀಡಿಯೆಟ್ ಪೇಮೆಂಟ್  ಸರ್ವಿಸ್‍ ಯೋಜನೆ: IMPS (Immediate Payment Service) ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಈ ಯೋಜನೆಯಿಂದ ಗ್ರಾಹಕರು ತಮ್ಮ ಖಾತೆಯಿಂದ ಇತರ ಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು. 

ಇಂಟರ್ನೆಟ್ ಬ್ಯಾಂಕಿಂಗ್‍ ಸೇವೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ (BBPS) ಯೋಜನೆ: ಇದು ಜನೋಪಯೋಗಿ ಯೋಜನೆಯಾಗಿದೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್, ಡಿ.ಟಿ.ಎಚ್. ರಿಚಾರ್ಜ್ ಇತ್ಯಾದಿ  ಪಾವತಿಗಳನ್ನು  ಬ್ಯಾಂಕಿನ ಶಾಖೆಗಳಲ್ಲಿ  ನಿರ್ವಹಿಸುವ ಯೋಜನೆ ಇದಾಗಿದೆ.


ಬ್ಯಾಂಕಿನ ಸಾಧನೆ

ಬ್ಯಾಂಕಿಗೆ 20 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 18 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ. 

ಎರಡು ಬಾರಿ ಫ್ರಾಂಟಿಯರ್ಸ್ ಇನ್ ಕೋ ಅಪರೇಟಿವ್ ಬ್ಯಾಂಕಿಂಗ್  ಎವಾರ್ಡ್ (ಎಫ್‍ಸಿಬಿಎ)  ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ.

ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ” ಲಭಿಸಿದೆ.

ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ“ಅಟಲ್ ಪಿಂಚಣಿ ಯೋಜನೆ”ಯನ್ನು ಬ್ಯಾಂಕ್ ಸಮರ್ಪಕವಾಗಿ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ಬ್ಯಾಂಕ್ ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ.

ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‍ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ.   ಬ್ಯಾಂಕ್ ಒಟ್ಟು 34,099 ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲಾ ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಈಗಾಗಲೇ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ. ಮಾತ್ರವಲ್ಲ ಪುರುಷ ಸದಸ್ಯರಿಗೂ ಬಿಳಿ ಸಮವಸ್ತ್ರ ನೀಡಲಾಗಿದೆ.   

ಜಿಲ್ಲೆಯಲ್ಲಿ ಒಟ್ಟು 1,22,728 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 89,924 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.

ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ, ಆರ್.ಟಿ.ಜಿ.ಎಸ್/ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್‍ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ.

ಬ್ಯಾಂಕಿನ 17 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.

ಬ್ಯಾಂಕ್ ಮಂಗಳೂರಿನ ಕೇಂದ್ರ ಕಛೇರಿಯಲ್ಲಿರುವ ಕೊಡಿಯಾಲ್‍ಬೈಲ್ ಶಾಖೆ ಸೇರಿದಂತೆ ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ಧಾಪುರಗಳಲ್ಲಿರುವ ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel) ಎಲ್ಲಾ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ. ಈಗಾಗಲೇ ಮಂಗಳೂರು ಮತ್ತು ಉಡುಪಿಯಲ್ಲಿ ಮೊಬೈಲ್ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ.

ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ.

ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್.

ಕಿಯೋಸ್ಕ್ ಯಂತ್ರ ಅಳವಡಿಕೆ: ಕೇಂದ್ರ ಶಾಖೆ ಕೊಡಿಯಾಲ್‍ಬೈಲ್‍ನಲ್ಲಿ ಗ್ರ್ರಾಹಕರಿಗೆ ತ್ವರಿತ ಸೇವೆಯನ್ನು ನೀಡುವ ಉದ್ದೇಶದಿಂದ ಕ್ಯಾಶ್ ಡೆಪಾಜಿಟ್ ಹಾಗೂ ಚೆಕ್ ಡೆಪಾಜಿಟ್ ಯಂತ್ರಗಳನ್ನು ಅಳವಡಿಸಲಾಗಿದೆ. 

ತರಬೇತಿ ಕೇಂದ್ರ: ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್ ಹೊಂದಿದೆ. 

ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್‍ ಪರಿಚಯಿಸಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್‍ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿ ಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.

ಮೊಬೈಲ್‍ ಆ್ಯಪ್: ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನ ಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ ವ್ಯವಹಾರದ ವಿಚಾರಣೆ, ಮಿನಿಸ್ಟೇಟ್‍ಮೆಂಟ್ ಹಾಗೂ ಪಾಸ್‍ಬುಕ್ ನಿರ್ವಹಣೆಯ ಸೌಲಭ್ಯ ಪಡೆಯಬಹುದಾಗಿದೆ.

ರಾಜ್ಯದಲ್ಲೇ ಪ್ರಥಮ ಬಾರಿಗೆ ಕಾಮನ್ ಸಾಫ್ಟ್‌ವೇರ್ ಅಳವಡಿಕೆ: ಏಕರೂಪದ ತಂತ್ರಾಂಶವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾಮನ್ ಸಾಫ್ಟ್‌ವೇರನ್ನು ಅಳವಡಿಸಲಾಗಿದೆ.ಇದು ರಾಜ್ಯದಲ್ಲೇ ಪ್ರಪ್ರಥಮವಾಗಿ ಜಾರಿಗೆ ತಂದ ಹೆಗ್ಗಳಿಕೆ ಬ್ಯಾಂಕಿನದ್ದಾಗಿದೆ.

ಸಿದ್ಧಾಪುರ ಶಾಖೆಗೆ ಹೊಸ ಕಟ್ಟಡ: ಕುಂದಾಪುರ ತಾಲೂಕಿನ ಸಿದ್ಧಾಪುರದಲ್ಲಿರುವ ಶಾಖೆಯ ನೂತನ ಕಟ್ಟಡ ೀ ವರ್ಷದ ಜ.1ರಂದು ಲೋಕಾರ್ಪಣೆಯಾಗಿದ್ದು ಈ ಶಾಖೆಯು ಎಟಿಎಂ ಸೌಲಭ್ಯದೊಂದಿಗೆ ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆಯನ್ನು ಹೊಂದಿರುತ್ತದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top