ಮಂಗಳೂರು: ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾಲೇಜ್ ಆಫ್ ಫಾರ್ಮಸಿ, ಕಾಲೇಜ್ ಆಫ್ ಫಿಸಿಯೋಥೆರಪಿ, ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನ ಪದವಿ ಪ್ರದಾನ ಸಮಾರಂಭ ವಳಚ್ಚಿಲ್ ಕ್ಯಾಂಪಸ್ನಲ್ಲಿ ಇಂದು ಏ.6 ಗುರುವಾರ) ನಡೆಯಿತು.
ಮುಖ್ಯ ಅತಿಥಿ ಬೆಂಗಳೂರಿನ Ace ಮ್ಯಾನುಫ್ಯಾಕ್ಚರಿಂಗ್ ಸಿಸ್ಟಮ್ ಲಿಮಿಟೆಡ್ನ ಡಿಜಿಎಂ- ಎಚ್ಆರ್ ನಾಗೇಶ್ ಅಡಿಗ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚುವರಿ ಕೌಶಲ್ಯಗಳನ್ನು ಕಲಿಯಲು ಹೆಚ್ಚಿನ ಶ್ರಮ ವಹಿಸಬೇಕು ಇದರಿಂದ ಅವರು ಭವಿಷ್ಯದಲ್ಲಿ ಸವಾಲುಗಳನ್ನು ಎದುರಿಸಬಹುದು ಮತ್ತು ತಮ್ಮ ಜೀವನದಲ್ಲಿ ಸಾಧನೆ ಮಾಡಬಹುದು ಎಂದರು.
ಗೌರವ ಅತಿಥಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಹಾಗೂ ಎ. ಶಾಮ ರಾವ್ ಫೌಂಡೇಶನ್ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್ ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಜೀವನದಲ್ಲಿ ಮತ್ತು ವೃತ್ತಿಜೀವನದಲ್ಲಿ ಯಶಸ್ವಿಯಾಗಲು ಬದ್ಧತೆ ಮತ್ತು ಕಠಿಣ ಪರಿಶ್ರಮ ಅಗತ್ಯ ಎಂದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಮತ್ತು ಎ. ಶಾಮ ರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ. ಸಿಎ. ಎ.ರಾಘವೇಂದ್ರ ರಾವ್ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಜೀವನದಲ್ಲಿ ಸಾಧಿಸಲು ಮನುಷ್ಯ ಕೊನೆಯವರೆಗೂ ಅಧ್ಯಯನ ಮಾಡಬೇಕು. ಪ್ರಯತ್ನಗಳು ಮತ್ತು ಮುಂದುವರಿದ ಅಧ್ಯಯನವು ಸಾಧನೆಗೆ ಸಹಾಯ ಮಾಡುತ್ತದೆ. ಸಮಾಜದಲ್ಲಿ ಸ್ವಂತವಾಗಿ ನಿಂತು ಸೇವೆ ಮಾಡಲು ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ ಎಂದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಎ. ವಿಜಯಲಕ್ಷ್ಮಿ ಆರ್.ರಾವ್ ಮತ್ತು ಪ್ರೊ. ಎ. ಮಿತ್ರಾ ಎಸ್. ರಾವ್, ಎಸ್ಸಿಪಿ ಮತ್ತು ಆರ್ಸಿ ಪ್ರಾಂಶುಪಾಲರು ಡಾ. ರಾಜಶೇಖರ್ ಎಸ್., ಎಸ್ಐಎನ್ಎಸ್ ಪ್ರಾಂಶುಪಾಲ ಡಾ. ಪ್ರದೀಪ ಎಂ., ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಉಪಸ್ಥಿತರಿದ್ದರು.
ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ಸ್ವಾಗತಿಸಿ, ಎಸ್ಸಿಪಿ ಪ್ರಾಂಶುಪಾಲ ಡಾ.ರಾಮಕೃಷ್ಣ ಶಬರಾಯ ಎ. ವಂದಿಸಿದರು. ಡಾ. ಅಂಬಿಕಾ ಮಲ್ಯ ಮತ್ತು ಪ್ರೊ. ಸ್ಟೀವನ್ ರಾಬರ್ಟ್ ಟೆಲೀಸ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ