ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

Upayuktha
0



ಮಂಗಳೂರು: ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಡಬ ಘಟಕದ ಮಾಜಿ ಘಟಕಾಧಿಕಾರಿ ಹೆಚ್.ಕೆ ಗೋಪಾಲ್ ಅವರಿಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು  ಹೆಚ್.ಕೆ ಗೋಪಾಲ್ ಅವರ ಭಾವ ಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ, ಮಾತನಾಡಿದರು.  ಹೆಚ್.ಕೆ ಗೋಪಾಲ್ ಅವರು 10-02-1994ರಲ್ಲಿ  ಗೃಹರಕ್ಷಕರಾಗಿ ಸೇರ್ಪಡೆಯಾಗಿ 30-08-2020 ರಂದು ನಿವೃತ್ತಿ ಹೊಂದಿರುತ್ತಾರೆ. ಇವರ ಸೇವೆಯು ನಮಗೆಲ್ಲ ಮಾದರಿಯಾಗಿದೆ,  ದೇವರು ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಮರೆಯುವ ಶಕ್ತಿಯನ್ನು ಆ ದೇವರು ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣವೆಂದು ನುಡಿದರು. 


ಗೃಹರಕ್ಷಕದಳದ ಉಪ ಸಮಾದೇಷ್ಟರಾದ ಶ್ರೀ ರಮೇಶ್,  ಕಚೇರಿಯ ಅಧೀಕ್ಷಕಿ ಶ್ರೀಮತಿ ಕವಿತಾ ಕೆ.ಸಿ, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ. ಎಸ್, ಮೀನಾಕ್ಷಿ, ಗೃಹರಕ್ಷಕರಾದ ದಿವಾಕರ್, ಸುನಿಲ್, ಜ್ಞಾನೇಶ್, ಸುರೇಂದ್ರ, ಮಂಜುಳಾ, ದಿವ್ಯಾ, ಸುಲೋಚನ, ಜಯಲಕ್ಷ್ಮೀ, ವಾರಿಜಾ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top