ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ (ಸ್ವಾಯತ್ತ) ತರಬೇತಿ ಮತ್ತು ನಿಯೋಜನೆ ವಿಭಾಗವು ಪ್ರತಿಷ್ಟಿತ ಕಂಪನಿಯಾದ ಆಲ್ಮಸೈನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆದಿದ್ದೂ, ಮೊದಲ ಹಂತದಲ್ಲಿ ವಿದ್ಯಾರ್ಥಿಗಳಿಗೆ ಆಪ್ಟಿಟ್ಯೂಡ್ಟೆಸ್ಟ್, ಎರಡನೇ ಹಂತದಲ್ಲಿ ಪ್ರಬಂಧ ಮಾದರಿಯ ಪ್ರಶ್ನೋತ್ತರ ಪರೀಕ್ಷೆ, ಕೊನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೇರ ಸಂದರ್ಶನವು ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹಾಗೂ ತರಬೇತಿ ಮತ್ತು ನಿಯೋಜನೆ ವಿಭಾಗದ ಸಂಯೋಜಕ ಡಾ.ಶ್ರೀಶ ಭಟ್, ಎನ್ಐಐಟಿಯ ನೇಮಕಾತಿಯ ವ್ಯವಸ್ಥಾಪಕರು ಪವಿತ್ರಾ ಮತ್ತು ಶ್ರೀನಿಧಿ ಉಪಸ್ಥಿತರಿದ್ದರು.
ಪದವಿ ವಿಭಾಗದ ಬಿಕಾಂ, ಬಿಸಿಎ ,ಬಿಎಸ್ಸಿ , ಎಂಕಾಂ ವಿದ್ಯಾರ್ಥಿಗಳು ಭಾಗಹಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ