ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ
ಕುಲಶೇಖರ: ಮನುಷ್ಯ ಕರ್ಮ ಜೀವಿ. ಜೀವನದಲ್ಲಿ ಕ್ಷಣಕ್ಷಣಕ್ಕೂ ನಾವು ಪಾಪ ಮಾಡುತ್ತಿರುತ್ತೇವೆ. ದೇಗುಲದ ಶಿಖರ ದರ್ಶನ, ಬಿಂಬದ ದರ್ಶನ ಮಾಡುವುದರಿಂದ ಪಾಪ ಕಳೆಯಲು ಸಾಧ್ಯವಿದೆ. ಬಿಂಬ ನಮ್ಮ ಪ್ರತಿಬಿಂಬದ ಪ್ರತೀಕವಾಗಿದ್ದು, ದೇವಸ್ಥಾನದ ಪಾವಿತ್ರ್ಯ ಕಾಪಾಡಿಕೊಂಡು ಬರುವ ಜವಾಬ್ದಾರಿ ನಮ್ಮದಾಗಬೇಕು. ಪಾವಿತ್ರ್ಯ ಹೆಚ್ಚಾಗಬೇಕಾದರೆ ಭಕ್ತಿಯ ಸ್ಮರಣೆಯಿಂದ ಸಾಧ್ಯವಿದೆ. ಕಲ್ಲು, ನೆಲ, ಜಲ, ಭೂಮಿಯನ್ನು ಪೂಜಿಸುವ ಹಿಂದೂ ಸಮಾಜ ಹೃದಯ ಶ್ರೀಮಂತಿಕೆಯ ಸಮಾಜ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ನುಡಿದರು.
ಮೇ 14ರಿಂದ ಮೊದಲ್ಗೊಂಡು 25ರವರೆಗೆ ಜರಗುತ್ತಿರುವ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ಸಂಜೆ ಜರಗಿದ ಪ್ರಥಮ ದಿನದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಮಂಗಳೂರಿನ ನ್ಯಾಯವಾದಿ ಉದಯಾನಂದ ಎ. ಅಧ್ಯಕ್ಷತೆ ವಹಿಸಿದ್ದರು. ಕುಡುಪು ಅನಂತಪದ್ಮನಾಭ ದೇವಸ್ಥಾನದ ಕೃಷ್ಣರಾಜ ತಂತ್ರಿ, ವಾಮಂಜೂರಿನ ಶ್ರೀಹರಿ ಉಪಾಧ್ಯಾಯ, ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವಾಸುದೇವ ಮೂಲ್ಯ, ಮಂಗಳೂರಿನ ಜ್ಯೋತಿಷಿ ಅನಂತಕೃಷ್ಣ ಭಟ್, ಮೆಸ್ಕಾಂ ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್, ಕೊಂಗೂರುಮಠ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಅನಂತ ಭಟ್ ಬಿ.ಇ., ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಶಿವಾನಂದ ಕನಡ, ಬೊಲ್ಪುಗುಡ್ಡೆ ಶ್ರೀ ಚಂಡಚಾಮುಂಡೇಶ್ವರಿ ಭಜನ ಮಂದಿರದ ಆಡಳಿತ ಮೊಕ್ತೇಸರ ಚಂದ್ರಶೇಖರ್, ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ದೇವಾಡಿಗ, ಶ್ರೀ ಕ್ಷೇತ್ರ ಶಿವಪದವು ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ರೋಹಿದಾಸ್, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಚಂದ್ರಶೇಖರ ಪಿ. ಮೂಲ್ಯ, ಮಂಗಳೂರು ಶ್ರೀದೇವಿ ದೇವಸ್ಥಾನದ ಅಧ್ಯಕ್ಷ ಪ್ರಸಾದ್ ಸಿದ್ದಕಟ್ಟೆ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಸೇವಾ ದಳಪತಿ ಕಿರಣ್ ಅಟ್ಲೂರು, ದ.ಕ. ಜಿಲ್ಲಾ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್, ಬಿ. ಮೋಹನದಾಸ್ ಅಳಪೆ, ಬ್ರಹ್ಮಕಲಶ ಸಮಿತಿ ಸಂಚಾಲಕ ಕೆ. ಸುಂದರ ಕುಲಾಲ್, ಪೂರ್ಣಕುಂಭ ಸ್ವಾಗತ ಸಮಿತಿಯ ಸಂಚಾಲಕಿ ಶ್ರೀಮತಿ ಗೀತಾ ಮನೋಜ್, ಮುಂಬೈ ಸಮಿತಿ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿ ಅಧ್ಯಕ್ಷ ಮಾದವ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಕು| ರಕ್ಷಾಸುಂದರ್ ಪ್ರಾರ್ಥಿಸಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ ಬಂಗೇರ ಪ್ರಾಸ್ತಾವಿಸಿ, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರ ಜೆ. ಮೂಲ್ಯ ವಂದಿಸಿದರು. ಪ್ರವೀಣ್ ಬಸ್ತಿ ನಿರೂಪಿಸಿದರು.
ಸಮ್ಮಾನ
ಮಂಗಳೂರಿನ ಇಂಜಿನಿಯರ್ ಜಿ. ನರೇಂದ್ರ ಪ್ರಭು, ಶಿಲ್ಪಿ ಎಸ್. ಹರೀಶ್ ರಾಯಿ, ದಾರುಶಿಲ್ಪಿ ಸುಂದರ ಆಚಾರಿ ಕೋಟೆಕಾರು, ಸಿವಿಲ್ ಗುತ್ತಿಗೆದಾರ ಹೊನ್ನಪ್ಪ ಕುಲಾಲ್, ಮಂಗಳೂರು ಶ್ರೀ ರಾಜರಾಜೇಶ್ವರಿ ಮೆಟಲ್ ಹೌಸ್ನ ಮಾಲಕ ಯಶವಂತ್ ಎಂ., ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ, ಗೋಪುರ ಶಿಲ್ಪಿ ಎಸ್. ದೊರೆಸ್ವಾಮಿ ಅವರನ್ನು ಸಮ್ಮಾನಿಸಲಾಯಿತು.
ಬೆಳಿಗ್ಗೆ ಕ್ಷೇತ್ರದಲ್ಲಿ ಭಜನೆ, ವಿಷ್ಣುಸಹಸ್ರನಾಮ ಪಾರಾಯಣ ಹಾಗೂ ಬೃಹತ್ ಶ್ರಮದಾನ ನಡೆಯಿತು. ಮಧ್ಯಾಹ್ನ ಎಡಪದವು ಶ್ರೀರಾಮ ಮಕ್ಕಳ ಕುಣಿತಾ ಭಜನ ತಂಡದಿಂದ ಭಜನೆ ಕಾರ್ಯಕ್ರಮ ಬಳಿಕ ಶಿಲ್ಪಿಗಳಿಂದ ದೇವಾಲಯ ಪ್ರತಿಗ್ರಹ ನಡೆಯಿತು.
ಕ್ಷೇತ್ರದಲ್ಲಿ ನಾಳೆ:
ಮೇ 16ರಂದು ಬೆಳಿಗ್ಗೆ ಕ್ಷೇತ್ರದಲ್ಲಿ ತಂತ್ರಿವರ್ಯರಿಗೆ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಗೋಪೂಜೆ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಮಧ್ಯಾಹ್ನ ಬಲ್ಲಾಳ್ಬಾಗ್ ಶ್ರೀ ಓಂ ಶಕ್ತಿ ದುರ್ಗಾಪರಮೇಶ್ವರಿ ಭಜನ ತಂಡದಿಂದ ಭಜನೆ, ಸಂಜೆ 3 ರಿಂದ ತನ್ಮಯಿ ಮೆಲೊಡಿಯಸ್ ಮಂಗಳೂರು ಅವರಿಂದ ಭಕ್ತಿರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಜೆ ನಡೆಯಲಿರುವ ಧಾರ್ಮಿಕಸಭೆಯಲ್ಲಿ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕರಿಂಜೆ ಶ್ರೀ ಜಗದ್ಗುರು ರಾಘವೇಂದ್ರ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಕುಡುಪು ಕ್ಷೇತ್ರ ಪ್ರಧಾನ ಅರ್ಚಕ ನರಸಿಂಹ ತಂತ್ರಿ, ಉಡುಪಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಧ್ಯಾಪಕ ದೇರೇಬೈಲು ಡಾ. ಶಿವಪ್ರಸಾದ್ ತಂತ್ರಿ, ಕುಕ್ಕಾಜೆ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಕೃಷ್ಣ ಗುರೂಜಿ, ನಡುಬೊಟ್ಟು ಉದ್ಭವ ರೌದ್ರನಾಥೇಶ್ವರ ಕ್ಷೇತ್ರದ ಧರ್ಮದರ್ಶಿ ರವಿ ಎನ್. ಸೇರಿದಂತೆ ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷರಾದ ವಿಠಲ್ ಕನೀರ್ತೋಟ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ 7-30ರಿಂದ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸುವ ರಾಷ್ಟ್ರ-ಧರ್ಮ-ಸಂಸ್ಕೃತಿ ಜಾಗೃತಿಯ ಪುಣ್ಯಭೂಮಿ ಭಾರತ ಎಂಬ ನೃತ್ಯ ವೈವಿದ್ಯ ಜರಗಲಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ