ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಿಂದ 'ಸರ್ವೋದಯ ಪರಿಕಲ್ಪನೆಯ ಪ್ರಸ್ತುತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ -ತುಮಕೂರು ಜಿಲ್ಲೆಯ ಒಂದು ಅಧ್ಯಯನ' ಕುರಿತು ಪ್ರೌಢ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪಡೆದಿರುವ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಉಲ್ಲಾಳ ವಿಭಾಗದ ಎಸಿಪಿ
ಡಾ. ಸಿ. ಬಸವರಾಜು ರವರಿಗೆ ಗೌರವಾಭಿನಂದನೆ ಮೇ 31ರಂದು ಬೆಳಗ್ಗೆ 8:30ಕ್ಕೆ ಹನುಮಂತನಗರದ ಶ್ರೀ ಬಾಲಾಜಿ ಪದವಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಸರ್ವೋದಯ ಮಂಡಲವು ಹನುಮಂತನಗರದ ಶ್ರೀ ಬಾಲಾಜಿ ವಿದ್ಯಾನಿಕೇತನದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ.
ಕರ್ನಾಟಕ ಸರ್ವೋದಯ ಮಂಡಲದ ಅಧ್ಯಕ್ಷ ಡಾ.ಎಚ್. ಎಸ್. ಸುರೇಶ್ ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಲೇಖಕ ಡಾ.ಆರ್. ವಾದಿರಾಜು, ಬೆಂಗಳೂರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ಮಂಡಲದ ಗೌರವ ಕಾರ್ಯದರ್ಶಿ ಡಾ. ಯ. ಚಿ. ದೊಡ್ಡಯ್ಯ , ಬೆಂ.ನ.ಜಿ. ಕರ್ನಾಟಕ ಸರ್ವೋದಯ ಮಂಡಲದ ಡಾ. ಅಧ್ಯಕ್ಷ ಗುರುರಾಜ ಪೋಶೆಟ್ಟಿಹಳ್ಳಿ ಉಪಸ್ಥಿತರಿರುತ್ತಾರೆ.
ಶ್ರೀ ಬಾಲಾಜಿ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಉಮೇಶ್ ದಕ್ಷಿಣಾಮೂರ್ತಿ ಸ್ವಾಗತಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ