ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ ಸಭೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ದಿನಾಂಕ: 19-05-2023 ರಂದು ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಆಸ್ಕಾ ಲೈಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಸರಿಯಾಗಿದಯೇ ಎಂದು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು ಸಿದ್ಧ ಪಡಿಸಿ, ಪ್ರವಾಹ ರಕ್ಷಣಾ ತಂಡದ ಸದಸ್ಯರುಗಳಿಗೆ ಪ್ರವಾಹ ರಕ್ಷಣೆಯನ್ನು ಯಾವ ರೀತಿಯಾಗಿ ಮಾಡುವುದು ಎಂದು ಮಾರ್ಗಸೂಚನೆ ನೀಡಿದರು. ಜಿಲ್ಲಾ ಕಛೇರಿಯಿಂದ ತುರ್ತುಕರೆ ಬಂದಾಗ ತಯಾರಾಗಿರುವಂತೆ ರಕ್ಷಣಾ ತಂಡದ ಸದಸ್ಯರುಗಳಿಗೆ ಸೂಚನೆ ನೀಡಿದರು.
ಕೇಂದ್ರ ಕಛೇರಿಯಿಂದ ನೀಡಲಾದ ಬೋಟ್ಗಳನ್ನು ಹಾಗೂ ಪ್ರವಾಹ ರಕ್ಷಣಾ ಸಾಮಾಗ್ರಿಗಳನ್ನು ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ದಿನೇಶ್ ಬಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಪ ಸಮಾದೇಷ್ಟರಾದ ಶ್ರೀ ರಮೇಶ್, ಅಧೀಕ್ಷಕಿ ಶ್ರೀಮತಿ ಕವಿತಾ ಕೆ.ಸಿ, ಗೃಹರಕ್ಷಕರಾದ ಸುನಿಲ್, ಅರವಿಂದ್, ಗಿರೀಶ್, ದಿವಾಕರ, ಆರಿಸ್, ಮಂಜುನಾಥ, ಜನಾರ್ಧನ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
