ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜುಗಳ ಸಹಯೋಗದಲ್ಲಿ ‘ರಾಷ್ಟ್ರೀಯ ಶಿಕ್ಷಣ ಪದ್ಧತಿ 2020 ರ ಅನುಷ್ಠಾನ: ಸವಾಲುಗಳು ಮತ್ತು ಭವಿಷ್ಯ- ಪಠ್ಯಕ್ರಮ, ಮೌಲ್ಯಮಾಪನ, ಫಲಿತಾಂಶʼ ಎಂಬ ರಾಷ್ಟ್ರೀಯ ವಿಚಾರಸಂಕಿರಣವೊಂದನ್ನು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮೇ 26 ರಂದು ಆಯೋಜಿಸಿದೆ.
ರಾಷ್ಟ್ರೀಯ ವಿಚಾರ ಸಂಕಿರಣದ ಅಂಗವಾಗಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಂಶೋಧನಾರ್ಥಿಗಳಿಂದ ವಿಷಯಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಬಂಧಗಳನ್ನು(ಕನ್ನಡ/ಇಂಗ್ಲಿಷ್/ಹಿಂದಿ) ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸಂಶೋಧನಾ ಪ್ರಬಂಧದ ಸಾರಾಂಶ (500 ಪದಗಳಿಗೆ ಮೀರದಂತೆ) ವನ್ನುಮೇ 21 ರೊಳಗೆ krmssmuv@gmail.comಗೆ ಕಳುಹಿಸಬಹುದು. ಪೂರ್ಣ ಪ್ರಬಂಧವನ್ನು ಮೇ 23ರೊಳಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಾ. ಗಾಯತ್ರಿ ಎನ್ (9945990963) ಇವರನ್ನು ಸಂಪರ್ಕಿಸಬಹುದು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ