ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ, ಮೂರನೇ ದಿನದ ಧಾರ್ಮಿಕ ಸಭೆ

Upayuktha
0

ಸಮಸ್ತ ಹಿಂದೂ ಸಮಾಜಕ್ಕೆ ಕುಲಾಲ ಸಮುದಾಯದ ಕೊಡುಗೆ ಅಪಾರ: ಹರೀಶ್‌ ಪೂಂಜಾ



ಕುಲಶೇಖರ: ಕುಲಾಲ ಸಮುದಾಯದ ನಿಸ್ವಾರ್ಥ ಕೊಡುಗೆ ಹಿಂದೂ ಸಮಾಜಕ್ಕೆ ಅಪಾರವಿದೆ. ಸಮಸ್ತ ಹಿಂದೂ ಸಮುದಾಯದ ಪ್ರತಿರೂಪವಾಗಿ ವೀರನಾರಾಯಣ ದೇವಸ್ಥಾನ ಬೆಳಗಿದೆ. ಸರಕಾರದ ಯಾವುದೇ ಅನುದಾನ ಇಲ್ಲದೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಕ್ಷೇತ್ರವನ್ನು ಬೆಳಗಿಸಿರುವುದು ನಿಜಕ್ಕೂ ಶ್ಲಾಘನೀಯ. ಕ್ಷೇತ್ರದ ಜೀರ್ಣೋದ್ಧಾರದ ದೃಷ್ಠಿಯಿಂದ ವೈಯುಕ್ತಿಕ ನೆಲೆಯಲ್ಲಿ ಗರಿಷ್ಠ ಮಟ್ಟದಲ್ಲಿ ಆರ್ಥಿಕ ಸಹಕಾರ ನೀಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿದರು.


ಅವರು ಮೇ 14ರಿಂದ ಮೊದಲ್ಗೊಂಡು 25ರವರೆಗೆ ಜರಗುತ್ತಿರುವ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬುಧವಾರ ಸಂಜೆ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.


ಮಾಣಿಲ ಶ್ರೀಧಾಮ ಶೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ, ಬೆಳಗಾವಿ ಕುಂಬಾರರ ಗುರುಪೀಠದ ಶ್ರೀ ಬಸವ ಗುಂಡಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.


ನಾನಿಲ್ತಾರ್ ಕುಲಾಲ ಸಂಘದ ಅಧ್ಯಕ್ಷ ಕುಶಾ ಆರ್. ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಕಟೀಲಿನ ಅನುವಂಶಿಕ ಮೊಕ್ತೇಸರ ವೇ|ಮೂ| ಅನಂತ ಪದ್ಮನಾಭ ಅಸ್ರಣ್ಣ, ಪ್ರಸಾದ ಅಸ್ರಣ್ಣ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯನಾರಾಯಣ ಕಶೆಕೋಡಿ, ಹಿಂದೂಯುವ ಸೇನೆಯ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಸಂಜೀವ ಸೂಟರ್‌ಪೇಟೆ, ಸೀತಾರಾಮ ಎ. ಅರೆಕೆರೆಬೈಲು, ಉರ್ವ ಮಾರಿಯಮ್ಮ ದೇವಸ್ಥಾನದ ಬಿ. ದೇವಾನಂದ ಗುಜರನ್, ಗಣೇಶ್ ಕುಲಾಲ್, ಉದ್ಯಮಿ ಆರ್. ದಿನೇಶ್ ಕುಮಾರ್ ಶೆಟ್ಟಿ, ಗಟ್ಟಿ ಸಮಾಜದ ಅಧ್ಯಕ್ಷ ದಯಾನಂದ ಗಟ್ಟಿ ಪಿಲಿಕೂರು, ನಿವೃತ್ತ ಬ್ಯಾಂಕ್ ಪ್ರಬಂಧಕ ಸತೀಶ್ ಭಟ್ ಕುಲಶೇಖರ, ವಿಶ್ರಾಂತ ಡೆಪ್ಯುಟಿ ಕಮಾಡೆಂಟ್ ಡಿ. ಚಂದಪ್ಪ ಮೂಲ್ಯ, ಡಾ. ಮಂಜುಯ್ಯ ಶೆಟ್ಟಿ, ಜಯಾನಂದ ಅಂಚನ್, ಕಾಳಿಕಾಂಬ ವಿನಾಯಕ ದೇವಸ್ಥಾನದ ಸುಂದರ ಆಚಾರ್ಯ, ಕುಲಾಲ ಸಮಾಜ ಸೇವಾ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಪುತ್ತೂರು, ಬೆಳ್ತಂಗಡಿ ಕುಲಾಲ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಬಾಬು ಬಿ.ಕೆ. ವಿಟ್ಲ, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಕೋಶಾಧಿಕಾರಿ, ನ್ಯಾಯವಾದಿ ಕುಶಾಲಪ್ಪ ಕುಲಾಲ್ ಕೆ., ಜತೆ ಕಾರ್ಯದರ್ಶಿ ಪ್ರದೀಪ್ ಅತ್ತಾವರ, ದೇವಸ್ಥಾನದ ಸಮಿತಿ ಪದಾಧಿಕಾರಿಗಳಾದ ಮಯೂರ್ ಉಳ್ಳಾಲ್, ಪುರುಷೋತ್ತಮ ಕುಲಾಲ್, ಬಿ. ಪ್ರೇಮಾನಂದ ಕುಲಾಲ್, ಕೆ. ಸುಂದರ ಕುಲಾಲ್, ದಾಮೋದರ ಎ. ಬಂಗೇರ, ಎಂ.ಪಿ. ಬಂಗೇರ ಬಿಜೈ, ಗೀತಾ ಮನೋಜ್, ಗಿರಿಧರ ಜೆ. ಮೂಲ್ಯ, ಬಿ. ಮೋಹನದಾಸ್ ಅಳಪೆ, ರಘು ಎ. ಮೂಲ್ಯ ಮುಂಬೈ, ಸುನಿಲ್ ಆರ್. ಸಾಲ್ಯಾನ್ ಮುಂಬೈ, ದಿವಾಕರ ಮೂಲ್ಯ ಬೆಂಗಳೂರು, ಬಿ. ದಿನೇಶ್ ಕುಲಾಲ್, ಮಾಧವ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಮೇಶ್ ಸಾಲ್ಯಾನ್ ಪ್ರಾರ್ಥಿಸಿ, ಕಾರ್ಯಾಧ್ಯಕ್ಷ ರವೀಂದ್ರ ಮುನ್ನಿಪ್ಪಾಡಿ ಸ್ವಾಗತಿಸಿ, ಸತೀಶ್ ಹೊಸ್ಮಾರು ನಿರೂಪಿಸಿದರು. ಬ್ರಹ್ಮಕಲಶ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರಿಧರ ಜೆ. ಮೂಲ್ಯ ವ೦ದಿಸಿದರು.

ದೇಗುಲದ ಪುನರ್ ನಿರ್ಮಾಣದಿ೦ದ ಸಮಾಜ, ಸಮುದಾಯ, ಧರ್ಮ, ದೇಶದ ಕಲ್ಯಾಣವಾಗುತ್ತದೆ.  ಸಮಾಜದಲ್ಲಿ ಶಾಂತಿ ನೆಮ್ಮದಿ ಮನೆ ಮಾಡಲಿ.

- ಮಾಣಿಲ ಶ್ರೀ



ಕ್ಷೇತ್ರದಲ್ಲಿ ಇಂದು (ಮೇ 18)

ಮೇ 18ರಂದು ಬೆಳಿಗ್ಗೆ ಮಹಾ ಮೃತ್ಯುಂಜಯ ಯಾಗ ಹಾಗೂ ವಿವಿಧ ವೈದಿಕ ವಿಧಾನಗಳು ನಡೆಯಲಿದೆ. ಸಂಜೆಯ ಧಾರ್ಮಿಕಸಭೆಯಲ್ಲಿ ಕೊಂಡೆವೂರು ಕ್ಷೇತ್ರದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಬೊಂಬೆಯಾಟವಯ್ಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top