ಮಂಗಳೂರು: ಹನುಮಾನ್ ಚಾಲೀಸಾ ಪಠಣ ಅಭಿಯಾನ

Upayuktha
0

ಮಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವ ಪ್ರಸ್ತಾಪದ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ವಿವಿಧ ದೇವಾಲಯಗಳಲ್ಲಿ ಭಕ್ತರು ಹನುಮಾನ್ ಚಾಲೀಸಾ ಪಠಣ ಅಭಿಯಾನ ಕೈಗೊಂಡಿದ್ದಾರೆ.


ಮಂಗಳೂರು ನಗರ ಉತ್ತರ ಶಾಸಕರೂ, ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಗಂಜಿಮಠದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಜರಂಗದಳ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ್ ಚಾಲೀಸಾ ಪಠಣದಲ್ಲಿ ಪಾಲ್ಗೊಂಡರು.


ಈ ಸಂದರ್ಭದಲ್ಲಿ  ಪ್ರಖಂಡ ಸಂಚಾಲಕರಾದ ರಾಜೇಶ್ ಅಂಚನ್, ಪಂಚಾಯತ್ ಅಧ್ಯಕ್ಷರಾದ ನೋಣಯ್ಯ ಕೋಟ್ಯಾನ್, ಇನ್ನಿತರ ಮುಖಂಡರು, ಗಣ್ಯರು, ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top