ಮಂಗಳೂರು: ಮೇ 27 ರಂದು ಪ್ರೊ. ಪಿ.ಎಸ್ ಯಡಪಡಿತ್ತಾಯರಿಗೆ ಅಭಿನಂದನಾ ಕಾರ್ಯಕ್ರಮ

Upayuktha
0


ಮಂಗಳೂರು:
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ವಯೋನಿವೃತ್ತಿ ಹೊಂದಲಿರುವ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಭಿನಂದನಾ ಕಾರ್ಯಕ್ರಮ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಮೇ 27 (ಶನಿವಾರ) ರಂದು ಸಂಜೆ 4.30 ಕ್ಕೆ ಆಯೋಜಿಸಲಾಗಿದೆ. 


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಪದ್ಮವಿಭೂಷಣ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್. ವಿನಯ್ ಹೆಗ್ಡೆ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. 


ಸಮಾರಂಭದ ಭಾಗವಾಗಿ ಅಪರಾಹ್ನ 3 ರಿಂದ 4 ಗಂಟೆಯವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ, ಎಂದು ಪ್ರೊ. ಪಿ ಎಸ್ ಯಡಪಡಿತ್ತಾಯ ಅಭಿನಂದನಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top