ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ತಾಯಿ ಚಾಮುಂಡೇಶ್ವರಿಯ ಸೇವೆ ಮಾಡಿದ್ದ ಬಲರಾಮ ಆನೆ ಅನಾರೋಗ್ಯದಿಂದ ಇಂದು ಮೃತಪಟ್ಟಿದೆ. ಬಲರಾಮನಿಗೆ 67 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಲರಾಮ ಕೆಲವು ದಿನಗಳಿಂದ ಆಹಾರ ಸೇವನೆ ನಿಲ್ಲಿಸಿತ್ತು. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ನ ಭೀಮನಕಟ್ಟೆ ಶಿಬಿರದಲ್ಲಿ ಪಶುವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು.
ಆನೆಗೆ ಗಂಟಲಿನಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರಗಳನ್ನು ತಿನ್ನಿಸಲಾಗುತ್ತಿತ್ತು.
1987ರಲ್ಲಿ ಕಟ್ಟೆಪುರ ಅರಣ್ಯದಲ್ಲಿ ಬಲರಾಮನನ್ನು ಸೆರೆಹಿಡಿಯಲಾಗಿತ್ತು. ಶಾಂತ ಸ್ವಭಾವದ ಬಲರಾಮನ ಬಗ್ಗೆ ನಾಡಿನ ಜನತೆ ವಿಶೇಷ ಪ್ರೀತಿ ಹೊಂದಿದ್ದರು. ಸೋಮವಾರ ಬೆಳಗ್ಗೆ 11 ಗಂಟೆ ವೇಳೆಗೆ ಬಲರಾಮನ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಹರ್ಷಕುಮಾರ್ ಮಾಧ್ಯಮಕ್ಕೆ ತಿಳಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ