ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ-ಜಿಲ್ಲಾ ಮಟ್ಟದ ಕಾರ್ಯಗಾರ

Upayuktha
0


ಮಣಿಪಾಲ್‌:
ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ ಉಡುಪಿ ಹಾಗೂ department of Ophthalmology ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಇಂದು ಮಣಿಪಾಲ ಕೆ.ಎಂ.ಸಿ.ಯ ಇಂಟರ್ಯಾಕ್ಟ್ ಕೆ.ಎಮ್.ಸಿ ಲೆಕ್ಚರ್ ಹಾಲ್‍ನಲ್ಲಿ ನಡೆಯಿತು.


ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ,ಜಿಲ್ಲಾಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಮಣಿಪಾಲ ಕಸ್ತೂರ್ಬಾ ಮೆಡಿಕಲ್‍ ಕಾಲೇಜ್‍ನ ಡೀನ್‍ ಡಾ. ಪದ್ಮರಾಜ್ ಹೆಗಡೆ, ಮಣಿಪಾಲ ಕೆ.ಎಂ.ಸಿ.ಯ ಮುಖ್ಯ ಅಧೀಕ್ಷಕ ಅವಿನಾಶ್ ಶೆಟ್ಟಿ, ಕೆ.ಎಂ.ಸಿ ಯ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನ್‍ಕುಮಾರ್, ನೇತ್ರತಜ್ಞ ಡಾ.ಯೋಗೀಶ್‍ಕಾಮತ್‍ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top