ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ವಿಶ್ವ ಕೈಗಳ ನೈರ್ಮಲ್ಯ ದಿನ ಆಚರಣೆ

Upayuktha
1 minute read
0

ನಿಮ್ಮ ಕೈಗಳನ್ನು ಸ್ವಚ್ಛಗೊಳಿಸಿ- ಜೀವಗಳನ್ನು ಉಳಿಸಿ



ಮಂಗಳೂರು: ಮುಕ್ಕ  ಶ್ರೀನಿವಾಸ್ ಆಸ್ಪತ್ರೆಯ ಸೋಂಕು ನಿಯಂತ್ರಣ (HIC) ವಿಭಾಗವು ಆಸ್ಪತ್ರೆಯ ಗುಣಮಟ್ಟ ವಿಭಾಗದೊಂದಿಗೆ ಮೇ 5ರಂದು ವಿಶ್ವ ಕೈ ನೈರ್ಮಲ್ಯ ದಿನವನ್ನು ಆಚರಿಸಿತು.


ನಾವು ಎಲ್ಲರೂ ಒಟ್ಟಾಗಿ ಆರೋಗ್ಯ ರಕ್ಷಣೆಯಲ್ಲಿ ಸೋಂಕುಗಳು ಮತ್ತು ಆಂಟಿಮೈಕ್ರೊಬಿಯಲ್ ಪ್ರತಿರೋಧವನ್ನು ತಡೆಗಟ್ಟುವ ಕ್ರಮವನ್ನು ವೇಗಗೊಳಿಸಬಹುದು ಮತ್ತು ಕೈಗಳ ಸ್ವಚ್ಛತೆಯ ಸಂಸ್ಕೃತಿಯನ್ನು ರೂಪಿಸಬಹುದು ಎಂಬ ಕಲ್ಪನೆಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಯಿತು.


ವೈದ್ಯಕೀಯ ಅಧೀಕ್ಷಕರಾದ ಡಾ ಡೇವಿಡ್ ರೊಸಾರಿಯೋ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಡೇವಿಡ್ ರೊಸಾರಿಯೋ, ಜಾಗತಿಕವಾಗಿ ಕೈ ತೊಳೆಯುವ ದಿನವನ್ನು ಆಚರಿಸಲಾಗುತ್ತಿದೆ. ಅರಿವು ಮೂಡಿಸಲು, ಸೋಂಕು ಹರಡುವುದನ್ನು ಕಡಿಮೆ ಮಾಡಲು ಈ ಸಂದೇಶವನ್ನು ಹರಡುವುದು ಮುಖ್ಯವಾಗಿದೆ. ಆದ್ದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಅನೇಕ ಜೀವಗಳನ್ನು ಉಳಿಸಲು ನಮ್ಮ ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮಗೆಲ್ಲರಿಗೂ ಬಹಳ ಮುಖ್ಯವಾಗಿದೆ ಎಂದರು.


ಬಳಿಕ, ಆಸ್ಪತ್ರೆಯ ಸಿಬ್ಬಂದಿಯಿಂದ ಕೈಗಳ ನೈರ್ಮಲ್ಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೈ ನೈರ್ಮಲ್ಯದ ಮಹತ್ವವನ್ನು ಪುನರುಚ್ಚರಿಸಲು ಮತ್ತು ಬೆಂಬಲಿಸಲು ವಿವಿಧ ಗಳನ್ನು ಪ್ರದರ್ಶಿಸಲಾಯಿತು. ವಿಶ್ವ ಕೈ ನೈರ್ಮಲ್ಯ ದಿನದಂದು ಆಯೋಜಿಸಲಾದ ವೈಯಕ್ತಿಕ ಮತ್ತು ಗುಂಪು ಕಾರ್ಯಕ್ರಮಗಳ ಫಲಿತಾಂಶಗಳನ್ನು ಪ್ರಕಟಿಸಲಾಯಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



Post a Comment

0 Comments
Post a Comment (0)
To Top