
ಮಂಗಳೂರು: ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ.
ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ.
ಕಂಬಳದ ನಿಷೇಧದ ಬಗೆಗೆ ಪ್ರಾಣಿ ದಯಾ ಸಂಘಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಈ ಹಿಂದೆ ಕರ್ನಾಟಕ ಸರಕಾರ ಪ್ರಾಣಿ ಹಿಂಸಾ ಕಾಯ್ದೆಗೆ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಿಂದ ನಮ್ಮ ಹೆಮ್ಮೆಯ ಕಂಬಳವನ್ನು ಸುಸೂತ್ರವಾಗಿ ನಡೆಸಲು ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹೋರಾಟದಲ್ಲಿ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ, ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ, ಎಲ್ಲಾ ಕಂಬಳ ಆಯೋಜಕರುಗಳಿಗೆ, ಕಂಬಳದ ಕೋಣಗಳ ಮಾಲೀಕರಿಗೆ, ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ