ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯ 118-ಬೈಂದೂರು, 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು , ಮತಯಂತ್ರ ಸೇರಿದಂತೆ ಇನ್ನಿತರೆ ಸಾಮಾಗ್ರಿಗಳೊಂದಿಗೆ ಪೋಲೀಸ್ ಬಂದೋಬಸ್ತ್ ನೊಂದಿಗೆ ಮತಗಟ್ಟೆಗಳಿಗೆ ಸುರಕ್ಷಿತವಾಗಿ ತಲುಪಿರುತ್ತಾರೆ.
ಈ ಮತದಾನ ಕಾರ್ಯಕ್ಕಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ Micro Observer ಹಾಗೂ ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಅಧ್ಯಕ್ಷಾಧಿಕಾರಿ (Presiding Officer) 1337, ಸಹಾಯಕ ಅಧ್ಯಕ್ಷಾಧಿಕಾರಿ Asst. Presiding Officer) 1337, 3 ಮತ್ತು 4 ಮತಗಟ್ಟೆ ಅಧಿಕಾರಿಗಳು 2674 ಹಾಗೂ 1111 ‘r’ ದರ್ಜೆ ನೌಕರರನ್ನು ನೇಮಿಸಲಾಗಿದೆ.
ಮತದಾರರು ತಮ್ಮ ಮತಗಟ್ಟೆ ಸಂಖ್ಯೆ ಮತ್ತು ಕ್ರಮ ಸಂಖ್ಯೆಯನ್ನು NVSP.in ಹಾಗೂ VHA APP ಮೂಲಕ ತಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ನಮೂದಿಸಿ ಮಾಹಿತಿಯನ್ನು ಪಡೆಯಬಹುದು.
ಮೇ 10 ರಂದು ನಡೆಯುವ ಮತದಾನ ಕಾರ್ಯಕ್ಕೆ ಮತದಾರರು EPIC CARD ಅಥವಾ ಚುನಾವಣಾ ಆಯೋಗ ತಿಳಿಸಿರುವ ಪರ್ಯಾಯ ಗುರುತಿನ ದಾಖಲೆಗಳಾದ ಆಧಾರ್ ಕಾರ್ಡ್ , ನರೇಗಾ ಉದ್ಯೋಗ ಗುರುತಿನ ಚೀಟಿ , ಅಂಚೆ ಕಛೇರಿ ಮತ್ತು ಬ್ಯಾಂಕ್ಗಳಲ್ಲಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ , ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್ ,ಪ್ಯಾನ್ ಕಾರ್ಡ್ , RGI ಮತ್ತು NPR ಮೂಲಕ ನೀಡಿರುವ ಸ್ಮಾರ್ಟ್ ಕಾರ್ಡ್, ಪಾಸ್ಪೋರ್ಟ್ , ಭಾವಚಿತ್ರ ಹೊಂದಿರುವ ಪಿಂಚಣಿ ಕಾರ್ಡ್ , ಕೇಂದ್ರ / ರಾಜ್ಯ / ಪಿಎಸ್ಯು / ಪಬ್ಲಿಕ್ ಲಿಮಿಟೆಡ್ ಕಂಪೆನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ , ಲೋಕಸಭಾ ಸದಸ್ಯರು / ರಾಜ್ಯಸಭಾ ಸದಸ್ಯರು / ಶಾಸಕರು / ವಿಧಾನಸಭಾ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳೊಂದಿಗೆ ತೆರಳಿ ಮತದಾನ ಮಾಡಬಹುದಾಗಿದೆ.
ವಿಶೇಷ ಚೇತನ ಮತದಾರರಿಗಾಗಿ ಗಾಲಿ ಕುರ್ಚಿ, ಭೂತಕನ್ನಡಿ (Magnified glass) ಬ್ರೈಲ್ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, Ramp, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ.
ಮೊಬೈಲ್ ಫೋನ್, ಡಿಜಿಟಲ್ , ಪೆನ್ ಕ್ಯಾಮೆರಾ, ಆಯುಧ , ಶಸ್ತ್ರಾಸ್ತ್ರ, ನೀರಿನ ಬಾಟಲ್ , ಯಾವುದೇ ದ್ರಾವಣ, ಆಹಾರ ಸಾಮಾಗ್ರಿಗಳು, ಯಾವುದೇ ಸ್ಪೋಟಕ ಮತ್ತಿತರ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿರುವುದಿಲ್ಲ.
ಸಾರ್ವಜನಿಕರು ಮೇ 10 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮತದಾನವನ್ನು ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕೋರಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ