ಆಳ್ವಾಸ್ ಕಾಲೇಜಿನಲ್ಲಿ ಸ್ವೀಪ್ ಚುನಾವಣಾ ಜಾಗೃತಿ

Upayuktha
0

 ಚುನಾವಣೆ ದೇಶದ ಹಬ್ಬ: ಡಾ.ಕುಮಾರ

ವಿದ್ಯಾಗಿರಿ: ‘ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ದಕ ಸ್ವೀಪ್ ಸಮಿತಿಯ ಅಧ್ಯಕ್ಷ ಡಾ. ಕುಮಾರ ಹೇಳಿದರು.


ಆಳ್ವಾಸ್ ಕಾಲೇಜಿನಲ್ಲಿ ಮಂಗಳವಾರ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ , ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಸಹಯೋಗದಲ್ಲಿ ‘ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023ರ ಪ್ರಜಾ ಪ್ರಭುತ್ವ ಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 


ಚುನಾವಣೆ ಎಂಬುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಿರೀಟವಿದ್ದಂತೆ. ಧಾರ್ಮಿಕ ಹಬ್ಬವನ್ನು ಆಚರಿಸುವಂತೆ ಪ್ರಜಾಪ್ರಭುತ್ವ ಹಬ್ಬವನ್ನು ಮತದಾನ ಮಾಡುವ ಮೂಲಕ ಆಚರಿಸಬೇಕು. ಮತದಾನವು ನಾಗರಿಕ ಹಾಗೂ ಸಂವಿಧಾನಬದ್ಧ ಹಕ್ಕಾಗಿದೆ, ನಮಗೆಲ್ಲರಿಗೂ ಸಂವಿಧಾನ ಕೊಟ್ಟ ಹಕ್ಕು ನೆನಪಿನಲ್ಲಿರುತ್ತದೆ. ಆದರೆ ಜವಾಬ್ದಾರಿಯನ್ನು ಮರೆಯುತ್ತೇವೆ. ಆದರೆ ಹಕ್ಕಿಗಿಂತ ಜವಾಬ್ದಾರಿಯೇ ಮುಖ್ಯ ಎಂದರು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಸಂವಿಧಾನ ನಮಗೆ ನೀಡಿದ ಹಕ್ಕು ಮತ್ತು ಜವಾಬ್ದಾರಿಗಳನ್ನು ಸರಿಯಾಗಿ ಉಪಯೋಗಿಸಬೇಕು.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನ ಮತವೇ ಅಂತಿಮ’ ಎಂದರು.


ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಕಾಲೇಜಿನ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್ ಇದ್ದರು. ವಿದ್ಯಾರ್ಥಿನಿ ಹರ್ಷಿತಾ ಹೆಗ್ಡೆ ನಿರೂಪಿಸಿ, ವಂದಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top