ಪುಸ್ತಕದಲ್ಲಿದ್ದ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗುವುದು: ನ್ಯಾಯವಾದಿ ಎಂ ಗುರುಪ್ರಸಾದ್ ಮಂಡ್ಯ

Upayuktha
0


ಮಂಗಳೂರು: ಕರ್ನಾಟಕ ಸಾಮಾಜಿಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮತ್ತು ಬರಹ ಪ್ರಕಾಶನ ಮಂಗಳೂರು ಸಾರಥ್ಯದಲ್ಲಿ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಶನಿವಾರ (ಜೂ.3) ಕೃತಿಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮ ಸಡಗರದಿಂದ ನಡೆಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯಾಯವಾದಿ ಗುರುಪ್ರಸಾದ್ ಮಾತನಾಡಿ, ಪುಸ್ತಕದಲ್ಲಿರುವ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗಿ ರೂಪುಗೊಳ್ಳುತ್ತದೆ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಇವನಾರವ ಇವನಾರವ ಎಂದೇನಿಸದೆ, ಇವ ನಮ್ಮವ ಇವ ನಮ್ಮವ ಎಂದು ಹೇಳುತ್ತಾ ಜಗತ್ತಿನಲ್ಲಿ ಜಾತಿ ಧರ್ಮ ಮೇಲು ಕೀಳು ಎಂಬ ಭಾವನೆ ನಮ್ಮಲ್ಲಿರದೆ ನಾವೆಲ್ಲ ಒಂದೇ ಎಂಬ ಭಾವನೆಯಿಂದ ಇರಬೇಕೆಂದು ಹೇಳಿದ್ದರು. 


ಅವರು ತಾಳೆಗರಿಯಲ್ಲಿ 900, ವರ್ಷಗಳ ಹಿಂದೆ ಬರೆದ ಎಷ್ಟೊಂದು ವಚನಗಳು ಇಂದು ನಮಗೆ ದಾರಿದೀಪವಾಗಿದೆ. ಆದುದರಿಂದ ಉತ್ತಮ ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಜೀವನವನ್ನು ಸಾರ್ಥಕ ಗೊಳಿಸಿಕೊಳ್ಳಬೇಕು ಎಂದರು. ನಾವು ಯಾವುದೇ ಶುಭ ಸಮಾರಂಭಗಳನ್ನು ಮಾಡುವಂತಹ ಸಂದರ್ಭದಲ್ಲಿ ಹಾರ ತುರಾಯಿ ನೀಡುವ ಬದಲು ಉತ್ತಮ ಪುಸ್ತಕಗಳನ್ನು ನೀಡಬೇಕು. ಪುಸ್ತಕಗಳನ್ನು ಓದುವ ಮೂಲಕ ನಮ್ಮಲ್ಲಿ ಜ್ಞಾನ ಸಂಪಾದನೆಯಾಗುತ್ತದೆ ಎಂದರು.


ಆ ಕಾಲದಲ್ಲಿ ಮಹಿಳೆಯರ ಸ್ವಾತಂತ್ರ್ಯಕ್ಕಾಗಿ ಒಂದು ಪಾರ್ಲಿಮೆಂಟನ್ನೇ ರಚಿಸಿ ಮಹಿಳೆಯರು ಮನೆಯಲ್ಲಿ ಬಂಧಿಯಾಗಿರದೇ ಸ್ವತಂತ್ರವಾಗಿ ಇರಬೇಕೆಂದು ಬಯಸಿದ್ದರು. ಇದರ  ದ್ಯೊತಕವಾಗಿ ಇಂದು ರಾಣಿ ಪುಷ್ಪಲತಾ ದೇವಿಯಂತವರು ಒಂದು ಸಂಸ್ಥೆಯನ್ನು ಸ್ಥಾಪಿಸಿ ಅಧ್ಯಕ್ಷರಾಗಿ ಕಾರ್ಯಕ್ರಮ ನಡೆಸಲು ಸಾಧ್ಯವಾಯಿತು ಎಂದು ಹೇಳಿದರು.  


ಆ ಬಳಿಕ ರಾಣಿ ಪುಷ್ಪಲತಾ ದೇವಿಯವರ ವರ್ಣರಂಜಿತ ಚಿತ್ರ ಕವನಸಂಕಲನ "ಭೂರಮೆಯೊಡಲು" ಹಾಗೂ ಡಾ. ಆನಂದ ಬಂಜನ್ ರವರ "ತುಳುನಾಡ ವೈಭವ" ಕೃತಿಗಳನ್ನು ಲೋಕಾರ್ಪಣೆ ಗೊಳಿಸಲಾಯಿತು.


ಇದೇ ಸಂದರ್ಭದಲ್ಲಿ ಭಾರತ ದೇಶದಾದ್ಯಂತ ಕನ್ನಡಕ್ಕಾಗಿ ದುಡಿದ ಸುಮಾರು 3500 ಪ್ರಮುಖರನ್ನು ಸನ್ಮಾನಿಸಿದ್ದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಹೆಚ್ ಎಲ್ ಎನ್ ರಾವ್ ಇವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಡಾಕ್ಟರ್ ಆನಂದ್ ಬಂಜನ್, ಕವಿಗೋಷ್ಟಿ ಅಧ್ಯಕ್ಷ ಡಾಕ್ಟರ್ ಫ್ರಾನ್ಸಿಸ್ ಕ್ಸೇವಿಯರ್, NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಕವಿಗೋಷ್ಠಿ ಸಂಚಾಲಕಿ ಸುಧಾ ಕಂದಕೂರ ಉಪಸ್ಥಿತರಿದ್ದರು.  


ರಾಜ್ ಸಂಪಾಜೆ ಮತ್ತು ರೇಖಾ ಸುರೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 40ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು. ಸಭಾ ಕಾರ್ಯಕ್ರಮದ ನಂತರ ಕಾರ್ತಿಕ್ ಡಾನ್ಸ್ ಅಕಾಡೆಮಿ ಬೆಂಗಳೂರು ಮತ್ತು ಶ್ರೀಮತಿ ಧನ್ಯ ಸಂತೋಷ್ ಸಾರಥ್ಯದ ಕೈರಾಳಿ ನಾಟ್ಯಾಲಯ ಹಾಗೂ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕವಿಗಳಿಗೆ ಮತ್ತು ಕಲಾವಿದರಿಗೆ ಪ್ರಶಂಸನಾ ಪತ್ರ ಮತ್ತು ಪುಸ್ತಕಗಳನ್ನು ನೀಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top