ಆಳ್ವಾಸ್ ಕಾಲೇಜಿನಲ್ಲಿ ‘ಹೂಡಿಕೆ ಜಾಗೃತಿ’ ವಿಶೇಷ ಉಪನ್ಯಾಸ

Upayuktha
0

‘ಷೇರು ಹೂಡಿಕೆ: ಈಗಲೇ ಚಿಂತಿಸಿ’



ವಿದ್ಯಾಗಿರಿ: ‘ಷೇರು ಮಾರುಕಟ್ಟೆ ಹೂಡಿಕೆ ಮಾಡುವವರ ಪಟ್ಟಿಯಲ್ಲಿ ಭಾರತವು 10ನೇ ಸ್ಥಾನದಲ್ಲಿದೆ’ ಎಂದು ಹಿರಿಯ ವಿದ್ಯಾರ್ಥಿ ಪಿ.ಎಸ್. ಅರುಣ್ ಕುಮಾರ್ ಹೇಳಿದರು. 

ಆಳ್ವಾಸ್ ಕಾಲೇಜಿನ ಐಕ್ಯೂಎಸಿ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ ನಡೆದ ‘ಹೂಡಿಕೆ ಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೋಷಕರು ನೀಡುವ ಹಣದ ಅಲ್ಪ ಪ್ರಮಾಣವನ್ನು ವಿದ್ಯಾರ್ಥಿಗಳು ಷೇರು ಮಾರುಕಟ್ಟೆಯಲ್ಲಿ ವ್ಯವಸ್ಥಿತ ರೂಪದಲ್ಲಿ ಹೂಡಿಕೆ ಮಾಡಿದರೆ ಲಾಭಾಂಶವನ್ನು ಪಡೆಯಬಹುದು ಎಂದರು. 

ಹಿಂದಿನ ಕಾಲದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ದೊಡ್ಡ ಮೊತ್ತದ ಅವಶ್ಯಕತೆ ಇತ್ತು. ಆದರೆ ಈಗ ಸಣ್ಣ ಮೊತ್ತವನ್ನೂ ಹೂಡಿಕೆ ಮಾಡಬಹುದು. ಅಮೆರಿಕದ ಒಟ್ಟು ಜನಸಂಖ್ಯೆಯ ಶೇ 65 ರಷ್ಟು ಜನ ಷೇರು ಮಾರುಕಟ್ಟೆಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುತ್ತಾರೆ. ಆದರೆ ನಮ್ಮ ದೇಶದಲ್ಲಿ ಕೇವಲ ಶೇ 1 ರಷ್ಟು ಜನ ಮಾತ್ರ ಹೂಡಿಕೆ ಮಾಡುತ್ತಾರೆ ಎಂದರು.

ಪ್ರಾAಶುಪಾಲ ಡಾ. ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಕೆಲಸಗಳು ಕೇವಲ ನಾಮಕಾವಸ್ತೆ ಆಗಬಾರದು.  ಕೆಲಸಗಳು ಮನಃಸಾಕ್ಷಿ ಒಪ್ಪುವಂತಿರಬೇಕು ಎಂದರು.

ವಿದ್ಯಾರ್ಥಿಗಳಾದ  ಶ್ರೇಯಾ ಪೊನ್ನಪ್ಪ ಸ್ವಾಗತಿಸಿ, ಸೌಜನ್ಯ ರವಿಪ್ರಕಾಶ್ ನಿರೂಪಿಸಿ, ಗ್ರೀಷ್ಮಾ ವಂದಿಸಿದರು.  ಉಪಪ್ರಾಂಶುಪಾಲೆ ಸುರೇಖಾ, ಸಂಯೋಜಕಿ ಶರ್ಮಿಳಾ ಕುಂದರ್ ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top