ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಈಶ್ವರ್ ಎಂ. ಜಿ. ಅವರು ಸಲ್ಲಿಸಿದ ‘ಕರ್ನಾಟಕ ನಗರ ಮತ್ತು ಗ್ರಾಮೀಣದಲ್ಲಿ ಆರೋಗ್ಯ ಸೇವೆಗಳು- ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಅಧ್ಯಯನ’ (ಹೆಲ್ತ್ ಕೇರ್ ಸರ್ವಿಸ್ ಇನ್ ಅರ್ಬನ್ - ರೂರಲ್ ಕರ್ನಾಟಕ: ಎ ಸ್ಟಡಿ ಇನ್ ಶಿವಮೊಗ್ಗ ಡಿಸ್ಟ್ರಿಕ್ಟ್) ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಕುವೆಂಪು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ಜಯರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.
ಈಶ್ವರ್ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಮೆಲ್ಪಾಲ್ ಗೋಪಾಲ ಹಾಗೂ ಕಾಳಿಯಮ್ಮ ಅವರ ಪುತ್ರ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ