ಬಜಪೆ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಅವರು ಜೂ.5 ರಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದರ ವಿರುದ್ದ ನಾಗರೀಕ ಹಿತರಕ್ಷಣಾ ಸಮಿತಿ ಎಡಪದವು- ಮಿಜಾರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಬುಧವಾರ ಎಡಪದವಿನ ಜಂಕ್ಷನ್ನಲ್ಲಿ ರಸ್ತೆ ತಡೆ ನಡೆದಾಗ ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬಸ್ಗಳ ಟೈಮಿಂಗ್ ವಿಚಾರದಲ್ಲಿ ಅರ್ಟಿಓ ಅಧಿಕಾರಿಗಳು, ಜಿಲ್ಲಾಧಿಕಾರಿ ಯವರೊಂದಿಗೆ ಬಸ್ಗಳ ಮಾಲಕರುಗಳು ಹಾಗೂ ಸಂಬಂಧಪಟ್ಟವರು ಒಟ್ಟು ಸೇರಿ ಮಾತುಕತೆ ನಡೆಸುವಂತಹ ಅವಶ್ಯಕತೆ ಇದೆ. ನಿಯಮಗಳನ್ನು ಮೀರಿ ಚಾಲನೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದರು.
ಈ ರೀತಿ ನಿಯಮ ಮೀರಿ ಚಾಲನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಬಜಪೆ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ಗುರುಕಾಂತಿ ಅವರಿಗೆ ಮನವಿಯನ್ನು ನೀಡಲಾಯಿತು.
ಪ್ರತಿಭಟನೆಯಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆಯ ಸುಧಾಕರ ಪೂಂಜಾ, ಎಡಪದವು ಗ್ರಾ.ಪಂ ಅಧ್ಯಕ್ಷ ಸುಕುಮಾರ್ ದೇವಾಡಿಗ, ನ್ಯಾಯವಾದಿ ವಿಜಯ ಗೌಡ ಶಿಬ್ರಿಕೆರೆ, ಎಡಪದವು ರಿಕ್ಷಾ-ಚಾಲಕ ಮಾಲಕರ ಸಂಘದ ಅಧ್ಯಕ್ಷ ಆನಂದ ದೇವಾಡಿಗ, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಕುಮಾರ್ ಎಂ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಆಶೋಕ್ ಆಚಾರ್ಯ, ಗ್ರಾ.ಪಂ ಸದಸ್ಯರುಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರೀಕರು ಪಾಲ್ಗೊಂಡಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ