ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಎಲ್ಲಾ 15 ಘಟಕಗಳ ಗೃಹರಕ್ಷರುಗಳಿಗೆ ಕೇಂದ್ರ ಕಛೇರಿ, ಬೆಂಗಳೂರಿನಿಂದ ಒಟ್ಟು 805 ಸಮವಸ್ತ್ರ ಹಾಗೂ ಬೂಟು, ಜರ್ಕಿನ್, ಕ್ಯಾಪ್, ಸೈಡ್ ಬ್ಯಾಡ್ಜ್, ಲಾಠಿ, ಬೂಟು ಪಾಲೀಶ್ ಮುಂತಾದ ಸಾಮಾಗ್ರಿಗಳು ಸರಬರಾಜು ಮಾಡಲಾಗಿರುತ್ತದೆ. ದಿನಾಂಕ: 23-06-2023 ನೇ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಸಾಂಕೇತಿಕವಾಗಿ ಬೆಳ್ತಂಗಡಿ ಘಟಕದ ಗೃಹರಕ್ಷಕ ಅಪ್ಪು ಇವರಿಗೆ ಉಚಿತ ಸಮವಸ್ತ್ರ ಹಾಗೂ ಪೂರಕ ಸಾಮಗ್ರಿಗಳನ್ನು ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ರವರು ವಿತರಿಸಿದರು ಹಾಗೂ ಎಲ್ಲಾ 15 ಘಟಕಗಳ ಗೃಹರಕ್ಷಕರು ಈ ಸಮವಸ್ತ್ರ ಸಾಮಾಗ್ರಿಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಟರಾದ ಶ್ರೀ ರಮೇಶ್, ಕಛೇರಿ ಅಧೀಕ್ಷಕರಾದ ಶ್ರೀಮತಿ ಕವಿತಾ ಕೆ.ಸಿ., ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್., ಹಾಗೂ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಭಾಸ್ಕರ್, ಮೂಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಲೋಕೇಶ್ ಮತ್ತು ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ