ಮಂಗಳೂರು ವಿವಿ ಪ್ರಸಾರಾಂಗದಿಂದ ಏಳು ಪಠ್ಯಪುಸ್ತಕಗಳ ಬಿಡುಗಡೆ

Upayuktha
0

ಪಠ್ಯ ಪೂರ್ವಗ್ರಹರಹಿತವಾಗಿರಲಿ: ಪ್ರೊ.ಜಯರಾಜ್ ಅಮೀನ್


ಮಂಗಳಗಂಗೋತ್ರಿ: ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯ ಪುಸ್ತಕಗಳಿಗೆ ಅತೀ ಹೆಚ್ಚು ಮಹತ್ವವಿದ್ದು ಅದು ತಲೆಮಾರುಗಳ ಆಲೋಚನೆಯನ್ನು ರೂಪಿಸುತ್ತದೆ. ಅಂತಹ ಪಠ್ಯರಚನೆಯಲ್ಲಿ ಪೂರ್ವಗ್ರಹಗಳು, ಜ್ಞಾನಕಿಂತ ಹೊರತಾದ ಹಿತಾಸಕ್ತಿ ಇರಬಾರದೆಂದು ಮಂಗಳೂರು ವಿವಿಯ ಕುಲಪತಿ ಪ್ರೊ. ಜಯರಾಜ್ ಅಮೀನ್ ಹೇಳಿದರು


ಅವರು ಬುಧವಾರ ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಮೂರನೇ ಚತುರ್ಮಾಸದ ಏಳು ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಸಿಂಡಿಕೇಟ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.


ಮಂಗಳೂರು ವಿವಿಯ ಕನ್ನಡ ಪಠ್ಯಗಳನ್ನು ಎಲ್ಲರ ಸಹಭಾಗಿತ್ವದಲ್ಲಿ ಸಕಾಲದಲ್ಲಿ ಸಂಪಾದಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತಿರುವ ಅಧ್ಯಯನ ಮಂಡಳಿ ಮತ್ತು ಪ್ರಸಾರಾಂಗದ ಕಾರ್ಯ ಶ್ಲಾಘನೀಯ ಎಂದರು.


ಮಂಗಳೂರು ವಿವಿ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ ಮಾತನಾಡಿ, ಮಂಗಳೂರು ವಿವಿಯ ಕನ್ನಡ ಪಠ್ಯ ಕರಾವಳಿಯ ಅಸ್ಮಿತೆ ಮತ್ತು ಮುದ್ರಣದ ಗುಣಮಟ್ಟದಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಎನ್‌ಇಪಿ ಪೂರಕವಾಗುವಂತೆ ಶ್ರದ್ಧೆಯಿಂದ ರೂಪಿಸಿದ ಇಲ್ಲಿನ ಪಠ್ಯಗಳು ಮಾದರಿಯಾಗಿವೆ ಎಂದರು.


ಸಮಾರಂಭದಲ್ಲಿ ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ, ಸಿಂಡಿಕೇಟ್ ಸದಸ್ಯ ರವಿಚಂದ್ರ, ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ, ಸಹಾಯಕ ನಿರ್ದೇಶಕ ಡಾ. ಧನಂಜಯ ಕುಂಬ್ಳೆ, ಪಠ್ಯ ಪುಸ್ತಕ ಕಾರ್ಯನಿರ್ವಾಹಕ ಸಂಪಾದಕ ಡಾ. ಮಾಧವ ಎಂ.ಕೆ, ನಾರಾಯಣ ಗುರು ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್, ಪೂರ್ಣಪ್ರಜ್ಞ ಕಾಲೇಜು ಉಡುಪಿ ಇಲ್ಲಿನ ಪ್ರಾಂಶುಪಾಲ ಡಾ. ರಾಘವೇಂದ್ರ, ಬಂಟ್ವಾಳ ಸರಕಾರಿ ಕಾಲೇಜು ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ ಶಿಶಿಲ, ಕವಿ ಜ್ಯೋತಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳ ಪಠ್ಯಪುಸ್ತಕ ಮಾಲಿಕೆಯಡಿ ಪ್ರಕಟಿಸಲಾದ ಮೂರನೇ ಚತುರ್ಮಾಸದ ಕನ್ನಡ ಭಾಷಾ ಪಠ್ಯಪುಸ್ತಕ ಕಲಾಮಂಗಳ, ವಾಣಿಜ್ಯ ಮಂಗಳ, ಮುಕ್ತ ಮಂಗಳ, ನಿರ್ವಹಣಾ ಮಂಗಳ, ಗಣಕ ಮಂಗಳ, ಸೌಂದರ್ಯ ಮಂಗಳ, ವಿಜ್ಞಾನ ಮಂಗಳ ಎಂಬ ಕೃತಿಗಳನ್ನು ಕುಲಪತಿಗಳು ಬಿಡುಗಡೆಗೊಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top