ರವೀಂದ್ರ ಕಲಾಭವನದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮವನ್ನು ಕ್ಯಾಲಿಕಟ್ನ ಆದಾಯ ತೆರಿಗೆ ಆಯುಕ್ತ ಕೆ ಎ ಚಂದ್ರಕುಮಾರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯವಿಭಾಗದ ಮುಖ್ಯಸ್ಥ ಡಾ. ಪರಮೇಶ್ವರ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. ಸ್ನಾತಕೋತ್ತರ ವಾಣಿಜ್ಯವಿಭಾಗದ ಸಂಯೋಜಕ ಪ್ರೊ. ಎ ಸಿದ್ಧಿಕ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಹಂಪನಕಟ್ಟೆಯ ಜಿ.ಹೆಚ್.ಎಸ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯವ್ಯವಸ್ಥಾಪಕಿ ಹರ್ಷಾ ಆರ್ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಸ್ನಾತಕೋತ್ತರ ವಾಣಿಜ್ಯವಿಭಾಗ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಈ ಫೆಸ್ಟ್ ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವುದಲ್ಲದೆ, ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತಿದೆ. ಈ ಬಾರಿ ಮಂಗಳೂರುವಿವಿ ವ್ಯಾಪ್ತಿಯ ಸುಮಾರು 15 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, 6 ವಿವಿಧ ಬಗೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ, ಎಂದು ಸಂಘಟಕರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ