ಪುತ್ತೂರಿನಲ್ಲಿ 60 ಕೋಟಿ ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ ಸ್ಥಾಪನೆಗೆ ಶಾಸಕರ ನೇತೃತ್ವದಲ್ಲಿ ಸಭೆ

Upayuktha
0

ಪುತ್ತೂರು: ಪುತ್ತೂರಿನಲ್ಲಿ ದ.ಕ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುಮಾರು 60 ಕೋಟಿ ರೂ ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ (ಮಿನಿ ಡೈರಿ) ನಿರ್ಮಾಣ ಮಾಡುವ ಉದ್ದೇಶದಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರು ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆ ನಡೆಸಿದರು. ಪುತ್ತೂರಿನಲ್ಲಿಯೇ ಸುಮಾರು 15 ಎಕ್ರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗಲಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದ್ದು ಜಾಗವನ್ನು ಪರಿಶೀಲಿಸುವಂತೆ ಒಕ್ಕೂಟಕ್ಕೆ ಶಾಸಕರು ಸೂಚನೆ ನೀಡಿದರು.


ಘಟಕ ಆರಂಭವಾದಲ್ಲಿ ಪುತ್ತೂರಿನ ಸುಮಾರು ಸಾವಿರ ಜನರಿಗೆ ಉದ್ಯೋಗವೂ ಲಭಿಸಲಿದೆ. ಪುತ್ತೂರಿನಲ್ಲಿ ವಿವಿಧ ಕೈಗಾರಿಕಾ ಘಟಕವನ್ನು ಪ್ರಾರಂಭಿಸಲು ಶಾಸಕರು ಉತ್ಸುಕರಾಗಿದ್ದು ಇದರಿಂದ ಸ್ಥಳೀಯರಿಗೆ ಉದ್ಯೋಗದ ಜೊತೆಗೆ ಪುತ್ತೂರಿನ ಅಭಿವೃದ್ದಿಗೂ ಪೂರಕವಾಗುತ್ತದೆ ಎಂದು ಶಾಸಕರು ಹೇಳಿದರು.


ಕಾರ್ಯಕ್ರಮದಲ್ಲಿ ಸಹಾಯಕ ಕಮಿಷನರ್, ತಹಶಿಲ್ದಾರ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷರಾದ ಎಸ್ ಬಿ ಜಯರಾಮ ರೈ, ನಿರ್ದೇಶಕರಾದ ನಾರಾಯಣ ಪ್ರಕಾಶ್, ಸುಧಾಕರ್ ರೈ, ಮ್ಯಾನೇಜರ್ ರವಿರಾಜ್ ಉಡುಪ, ಸಹಾಯಕ ವ್ಯವಸ್ಥಾಪಕರಾದ ಡಾ. ಸತೀಶ್ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top