ಪುತ್ತೂರು ವಿವೇಕಾನಂದ ಕಾಲೇಜ್‌ : ಥಾಟ್ ಫೋಕಸ್ ಕಂಪೆನಿ ಕ್ಯಾಂಪಸ್ ನೇಮಕಾತಿ

Upayuktha
0


ಪುತ್ತೂರು:
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ನಡೆಯುತ್ತಿದ್ದು ಕಾರ್ಪೋರೇಟ್ ಜಗತ್ತಿನ ಪ್ರಖ್ಯಾತ ಕಂಪೆನಿ ಥಾಟ್ ಫೋಕಸ್ (Thought Focus) ಸಂಸ್ಥೆಯು ನೇಮಕಾತಿ ಪ್ರಕ್ರಿಯೆಯನ್ನು ನಡೆಸಿತ್ತು. 


ಕಂಪ್ಯೂಟರ್ ಸೈನ್ಸ್ ವಿಭಾಗದ ಧರಿತ್ರಿ (ಬೆಳ್ತಂಗಡಿಯ ಇಳಂತಿಲದ ಸುಚೇತಾ ಹಾಗೂ ಸುಬ್ರಮಣ್ಯ ಕುಮಾರ್ ದಂಪತಿಗಳ ಪುತ್ರಿ) ಹಾಗೂ ಸೋನಮ್ (ನರಿಮೊಗರಿನ ಶರ್ಮಿಳಾ ಹಾಗೂ ಶಶಿಧರ್ ಕುಮಾರ್ ಇವರ ಪುತ್ರಿ) ಇವರು ಸಂದರ್ಶನವನ್ನು ಯಶಸ್ವಿಯಾಗಿ ಎದುರಿಸಿ ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ವಾರ್ಷಿಕ 5 ಲಕ್ಷ ರೂಗಳ ವೇತನವನ್ನು ನೀಡುವ ಟ್ರೈನೀ ಇಂಜಿನಿಯರ್ ಹುದ್ದೆಗೆ ಇವರು ಆಯ್ಕೆಯಾಗಿದ್ದಾರೆ. 


ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯನ್ನು ಸಮರ್ಥವಾಗಿ ಎದುರಿಸಲು ಬೇಕಾದ ಅಗತ್ಯ ತರಬೇತಿಯನ್ನು ಕಾಲೇಜಿನ ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಅವರು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
To Top