ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾವಿಭಾಗದ ವಿದ್ಯಾರ್ಥಿಗಳಿಗೆ ಇಕೋಕ್ಲಬ್ ವತಿಯಿಂದ ವಿವೇಕಸಂಜೀವಿನಿ ಬಗ್ಗೆ ಮಾಹಿತಿ ನೀಡಲಾಯಿತು. ಕಾಲೇಜಿನ ಜೀವಶಾಸ್ತ್ರವಿಭಾಗದ ಉಪನ್ಯಾಸಕರಾದ ಮುರಳಿ ಪಿ.ಜಿ ಇವರು ಔಷಧಸಸ್ಯಗಳ ಮಹತ್ವ ,ಉಪಯೋಗ ಹಾಗೂ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು ಜೊತೆಗೆ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಬೆಳೆಸಬಹುದಾದ ಔಷಧ ಸಸ್ಯಗಳ ಬಗ್ಗೆ ಮಾಹಿತಿ ನೀಡಿ ಜಾಗ್ರತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹೇಮಲತಾ, ರಂಜಿನಿ ಹಾಗು ಕವಿತಾ ಉಪಸ್ಥಿತರಿದ್ಧರು. ವಿಧ್ಯಾರ್ಥಿನಿ ಸಂಜನಾ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅನುಪಮಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ