ವಿವೇಕಾನಂದ ಕಾಲೇಜಿನಲ್ಲಿ 'ಪಥ' ಕಿರುಚಿತ್ರ ಬಿಡುಗಡೆ
ಪುತ್ತೂರು: ಪ್ರಸ್ತುತ ದಿನಗಳಿಗೆ ಹೋಲಿಸಿದರೆ ಅಂದಿನ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಅವಕಾಶಗಳು ಇರಲಿಲ್ಲ. ಆದರೆ ಈಗ ವಿದ್ಯಾರ್ಜನೆಗೈಯುವ ವಿದ್ಯಾರ್ಥಿಗಳು ಓಡುತ್ತಿರುವ ಕಾಲದ ಜೊತೆ ಸೇರಿಕೊಂಡಿದ್ದಾರೆ. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ವಿಪುಲವಾದ ಅವಕಾಶಗಳಿವೆ. ಹಾಗಾಗಿ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು 'ಪಥ'ದಂತಹ ಒಳ್ಳೆಯ ಕಥೆಗಳು, ಕಿರುಚಿತ್ರಗಳು ಇನ್ನೂ ಹೆಚ್ಚು ಮೂಡಿಬರಲಿ ಎಂದುಖ್ಯಾತ ನಟ,ಬಿಗ್ ಬಾಸ್ ನ ವಿನ್ನರ್ರೂಪೇಶ್ ಶೆಟ್ಟಿ ಮಾತನಾಡಿದರು.
ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ(ಸ್ವಾಯತ್ತ) ಐಕ್ಯೂಎಸಿ ಹಾಗೂ ಪತ್ರಿಕೋದ್ಯಮ ವಿಭಾಗದಆಶ್ರಯದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ 'ಪಥ' ಕನ್ನಡ ಕಿರುಚಿತ್ರದ ಬಿಡುಗಡೆ ಸಮಾರಂಭದಲ್ಲಿ ಉದ್ಘಾಟಕರಾಗಿ ಮಾತನಾಡಿದರು.
ಈ ಸಂದರ್ಭದಲ್ಲಿಇನ್ನೋರ್ವ ಮುಖ್ಯಅತಿಥಿಯಾಗಿ ಭಾಗವಹಿಸಿದ ತುಳುನಾಡಿನ ಖ್ಯಾತ ಹಾಸ್ಯ ನಟ, ಕಾಂತಾರಖ್ಯಾತಿಯ ದೀಪಕ್ರೈ ಪಾಣಾಜೆ ಮಾತನಾಡಿ, ವಿವೇಕಾನಂದ ಕಾಲೇಜು ಪಠ್ಯದಜೊತೆಗೆ ಪಠ್ಯತರ ಕಾರ್ಯಗಳಿಗೆ ಬೆನ್ನೆಲುಬಾಗಿದೆ. ಮಕ್ಕಳು ಓದುವುದರ ಜೊತೆಗೆತಮಗೆ ಯಾವ ವಿಷಯದಲ್ಲಿ ಆಸಕ್ತಿ ಇವೆಯೋ ಅದರಲ್ಲಿ ಭಾಗವಹಿಸುವಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣಕೆ.ಎನ್ ಮಾತನಾಡಿ, ಮಕ್ಕಳ ಬೆಳವಣಿಗೆ ನಮ್ಮ ಸಹಕಾರ ಎಂದಿಗೂ ಇದ್ದೇ ಇರುತ್ತದೆ. ಶಿಕ್ಷಣದ ಜೊತೆಗೆಇತರ ಚಟುವಟಿಕೆಗಳೂ ಅಗತ್ಯ. ವಿದ್ಯಾರ್ಥಿ ಗಳ ಕೀರ್ತಿಉತ್ತುಂಗಕ್ಕೇರಲಿ ಎಂದು ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ ಎನ್ ಶುಭ ಹಾರೈಸಿದರು.
ಪಥ ಕಿರುಚಿತ್ರವು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಅಚಲ್ಉಬರಡ್ಕ ನಿರ್ದೇಶಿಸಿ, ಯೋಶಿತ್ ಬನ್ನೂರುಛಾಯಾಗ್ರಹಣ ಹಾಗೂ ಸಂಕಲನವನ್ನು ನಮನ್ ಶೆಟ್ಟಿ ಮಾಡಿದ್ದಾರೆ. ಅಶ್ವಿನ್ ಬಾಬಣ್ಣ ಸಂಗೀತ ನಿರ್ದೇಶನ ಮಾಡಿರುತ್ತಾರೆ.ಪಥಕಿರುಚಿತ್ರದ ನಾಯಕನಾಗಿಅಚಲ್ಉಬರಡ್ಕ ಮತ್ತು ನಾಯಕಿಯಾಗಿ ವಿಷ್ರಿತಆಚಾರ್ಯರವರು ಅಭಿನಯಿಸಿದ್ದಾರೆ ಹಾಗೂ ಶರತ್ ಕೆ ಎನ್,ಸ್ವಸ್ತಿಕ್ ಶೆಟ್ಟಿ,ಅರಹಂತ್ಜೈನ್,ಗಗನ್ದೀಪ್, ಮಂಜುನಾಥ್ಜೋಡುಕಲ್ಲು,ಸುರಕ್ಷಾ ಮುಂತಾದವರು ಅಭಿನಯಿಸಿದ್ದಾರೆ.
ವೇದಿಕೆಯಲ್ಲಿ ಪುತ್ತೂರಿನ ಕಹಳೆ ನ್ಯೂಸ್ ನ ಮುಖ್ಯ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ, ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್, ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್ ಜಿ,ವಿಶೇಷಅಧಿಕಾರಿ ಶ್ರೀಧರ್ ನಾಯ್ಕ್ ಭಟ್ ಉಪಸ್ಥಿತರಿದ್ದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ಪ್ರಸ್ತಾವಿಸಿ ಸ್ವಾಗತಿಸಿದರು.,ವಿದ್ಯಾರ್ಥಿ ಮಂಜುನಾಥ್ ಜೋಡುಕಲ್ಲು ವಂದಿಸಿ,ಹರಿಪ್ರಸಾದ್ ನಿರೂಪಿಸಿದರು.
ಒಂದು ಬಾರಿ ಸೋತರೂ ಪುನಃ ಗೆಲ್ಲುವೆ ಎಂಬ ಛಲವಿದ್ದರೆ ಸಾಧನೆ ಸಾಧ್ಯ. ತಾವು ಬರೆದಂತಹ ಒಂದು ಸಣ್ಣಕಥೆ ನೋಡುಗರಿಗೆ,ಕೇಳುಗರಿಗೆ ಇಷ್ಟವಾದರೆ ಸಾಕು ನಾವು ಗೆದ್ದಂತೆ.ಪಥ ಕಿರುಚಿತ್ರವು ಇನ್ನೂ ಉನ್ನತಿ ಕಾಣಲಿ ಎಂದು ನಟ,ಖ್ಯಾತ ನಿ ಖಎ ಅನುರಾಜ್ ಹಾರೈಸಿದರು.
ಪಥಚಿತ್ರ ಬಿಡುಗಡೆಗೆ ಮುನ್ನವೇ 'ರಾಜ್ಯಮಟ್ಟದ ಉತ್ತಮ ಛಾಯಾಗ್ರಹಣ ಪ್ರಶಸ್ತಿ'ಯನ್ನು ಪಡೆದುಕೊಂಡಿರುವುದು ಚಿತ್ರದ ಯಶಸ್ವಿಗೆ ಕಾರಣವಾಗಿದೆ.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ