ಇವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಧಿತ್ವ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, "ಜ್ಞಾನ ಮತ್ತು ಅಭ್ಯಾಸದೊಳಗೆ ಜೀವನದ ಯಶಸ್ಸಿನ ಗುಟ್ಟುಅಡಗಿದೆ. ಇದರೊಂದಿಗೆ ಹೊಸ ಹೊಸ ಅವಿಷ್ಕಾರಗಳನ್ನು ಮಾಡುತ್ತಲೇಇರಬೇಕು. ಹಾಗೆಯೇ ಮಾಡಿದಂತಹ ಪ್ರಯತ್ನಗಳು ನಿಷ್ಫಲವಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಕೌಶಲ್ಯಾಭಿವೃದ್ಧಿಯಂತಹ ಕಾರ್ಯಕ್ರಮಗಳು ಅಗತ್ಯ" ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್ ಮಾತನಾಡಿ, "ವಿದ್ಯಾರ್ಥಿಗಳು ಯಾವತ್ತೂತಮ್ಮ ಪ್ರತಿಭೆಗಳನ್ನು ಹೊರಹಾಕಲು ವೇದಿಕೆಗಳನ್ನು ಬಳಸಿಕೊಳ್ಳಬೇಕೇ ಹೊರತು ಪ್ರಶಸ್ತಿಗಾಗಿ ಅಲ್ಲ. ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಸಹ ಪ್ರತಿಭೆಗಳನ್ನು ರೂಪಿಸುವ ಒಂದುಉತ್ತಮ ವೇದಿಕೆ. ಇದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು "ಎಂದರು.
ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್, ಎಂ ಕಾಂ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ, ಪರೀಕ್ಷಾಂಗ ಕುಲಸಚಿವ ಡಾ. ಹೆಚ್ ಜಿ ಶ್ರೀಧರ್, ಕಾಲೇಜಿನ ವಿಶೇಷಅಧಿಕಾರಿಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು. ಎಂಕಾಂ ವಿದ್ಯಾರ್ಥಿಅಕ್ಷಿತಾ ಸ್ವಾಗತಿಸಿ, ಜಗತ್ ವಂದಿಸಿದರು.ವಿದ್ಯಾರ್ಥಿನಿಯರಾದ ಅನನ್ಯ, ಶರಣ್ಯ, ಮೈತ್ರಿ ಪ್ರಾರ್ಥಿಸಿ, ವಿದ್ಯಾರ್ಥಿನಿಯರಾದ ವಿಭಾಶ್ರೀ ಭಟ್ ಹಾಗೂ ಲತಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ