ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ: ಶ್ರೀನಿವಾಸ ವಿವಿಯಲ್ಲಿ ಅತಿಥಿ ಉಪನ್ಯಾಸ

Upayuktha
0

 



ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್‌ನಲ್ಲಿ 'ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ' ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.


ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಗೆ ಸಕ್ರಿಯವಾಗಿ ಕೊಡುಗೆ ನೀಡಲು ಯುವಕರನ್ನು ಸಶಕ್ತಗೊಳಿಸುವ ಮತ್ತು ಪ್ರೇರೇಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸಿಂಗಾಪುರದ ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ವಿಮೋಕ್ಷಾನಂದಜಿ ಮಹಾರಾಜ್ ಅವರು ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು. ಭಾರತೀಯ ಸೇನೆಯ ಮಾಜಿ ಸೈನಿಕರಾದ ಬೆಳ್ಳಾಲ ಗೋಪಿನಾಥ್ ರಾವ್ ಅವರು ಈ ಸಂದರ್ಭದಲ್ಲಿ ಆಹ್ವಾನಿತ ಅತಿಥಿಗಳಾಗಿ ಭಾಗವಹಿಸಿದ್ದರು.


ಪ್ರಥಮ ವರ್ಷದ ಬಿಬಿಎ (ಏವಿಯೇಷನ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿ ಅಭಿಷೇಕ್ ಕಿಣಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು,  ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ನ ಡೀನ್ ಡಾ. ಪವಿತ್ರ ಕುಮಾರಿ ಸ್ವಾಗತಿಸಿದರು. ಗಣ್ಯರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ದೀಪ ಬೆಳಗಿಸಿದರು.


ಜ್ಞಾನ ಮತ್ತು ಪರಿಣತಿಯ ಸಂಪತ್ತನ್ನು ಹೊಂದಿರುವ ಸ್ವಾಮಿ ವಿಮೋಕ್ಷಾನಂದಜಿ ಮಹಾರಾಜ್ ಅವರು ರಾಷ್ಟ್ರ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ಅಂಶಗಳ ಮೇಲೆ ಬೆಳಕು ಚೆಲ್ಲಿದರು. ಭವಿಷ್ಯವನ್ನು ರೂಪಿಸುವಲ್ಲಿ ಯುವಕರ ಶಕ್ತಿಯನ್ನು ಒತ್ತಿಹೇಳಿದರು. ವೈಯಕ್ತಿಕ ಅನುಭವಗಳು ಮತ್ತು ವ್ಯಾಪಕವಾದ ಸಂಶೋಧನೆಗಳ ಅನುಭವವನ್ನು ತೆರೆದಿಟ್ಟ ಅವರು, ಸಕಾರಾತ್ಮಕ ಬದಲಾವಣೆಯನ್ನು ಚಾಲನೆ ಮಾಡುವಲ್ಲಿ ಯುವಕರ ಭಾಗೀದಾರಿಕೆ, ನಾವೀನ್ಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು.


ಏವಿಯೇಷನ್ ಸ್ಟಡೀಸ್ ಇನ್‌ಸ್ಟಿಟ್ಯೂಟ್ ಪ್ರಾಧ್ಯಾಪಕಿ  ಪ್ರೊ.ಚೈತ್ರಾ ಅವರು ಧನ್ಯವಾದ ಸಮರ್ಪಿಸಿದರು. ಪ್ರಾಧ್ಯಾಪಕಿ ಪ್ರೊ.ದೀಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top