ಔದ್ಯೋಗಿಕ ಪರಿಣತಿಗೆ ವಿದ್ಯಾರ್ಥಿಗಳು ತರಬೇತಿಯ ಮೂಲಕ ಸಜ್ಜಾಗ ಬೇಕು: ರಮೇಶ್ ರಾವ್ ಎಂ

Upayuktha
0


ಸುರತ್ಕಲ್‌:
ಔದ್ಯೋಗಿಕ ಪರಿಣತಿಗೆ ವಿದ್ಯಾರ್ಥಿಗಳು ತರಬೇತಿಯ ಮೂಲಕ ಸಜ್ಜಾಗ ಬೇಕೆಂದು ಗೋವಿಂದ ದಾಸ ಕಾಲೇಜು ಅಲುಮ್ನಿ ಅಸೋಸಿಯೇಶನ್‍ನ ಅಧ್ಯಕ್ಷ ರಮೇಶ್ ರಾವ್ ಎಂ ನುಡಿದರು. ಗೋವಿಂದ ದಾಸ ಕಾಲೇಜಿನ ಪ್ಲೇಸ್‍ಮೆಂಟ್ ಸೆಲ್, ಎಂ.ಕಾಂ. ಸ್ನಾತಕೋತ್ತರ ವಿಭಾಗ, ಎಂ.ಎಸ್ಸಿ ಸ್ನಾತಕೋತ್ತರ ವಿಭಾಗ ಮತ್ತು ಗೋವಿಂದ ದಾಸ ಕಾಲೇಜು ಅಲುಮ್ನಿ ಅಸೋಸಿಯೇಶನ್ ಗಳ ಆಶ್ರಯದಲ್ಲಿ ನಡೆದ ಔದ್ಯೋಗಿಕ ಉತ್ಕೃಷ್ಟತೆಗೆ ಕೌಶಲ್ಯ ಪರಿಣತಿ – ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.


ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ ಕುಳಾಯಿ ಸ್ನಾತಕೋತ್ತರ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಶಿಕ್ಷಣ ಪಡೆದುಕೊಳ್ಳ ಬೇಕಾಗಿದೆಂದರು.


ಸಂಪನ್ಮೂಲ ವ್ಯಕ್ತಿ ಪ್ರೊ. ಮೇಜರ್ ರಾಧಾಕೃಷ್ಣ ಎಂ. ಅವರು ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವ ಹಾದಿಯಲ್ಲಿ ಇರುವ ತೊಡಕುಗಳನ್ನು ನಿವಾರಿಸಿ ವಿಶಿಷ್ಟ ಕೌಶಲ್ಯಗಳನ್ನು ರೂಢಿಸಿಕೊಳ್ಳುವ ಬಗೆಯ ಕುರಿತು ತರಬೇತಿ ನೀಡಿದರು.


ಕಾಲೇಜಿನ ಉಪಪ್ರಾಂಶುಪಾಲ ಹಾಗು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ್ ಭಟ್ ಎಸ್.ಜಿ., ಎಂ.ಕಾಂ. ವಿಭಾಗದ ಮುಖ್ಯಸ್ಥ ಸಜನ್ ಎಂ.ಆಚಾರ್ಯ, ಎಂ.ಎಸ್ಸಿ ವಿಭಾಗದ ಮುಖ್ಯಸ್ಥ ಡಾ.ಕಾರ್ತಿಕ್ ಜೆ.ಎಸ್ ಉಪಸ್ಥಿತರಿದ್ದರು. ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top