ಬೆಳ್ತಂಗಡಿ: ಬೆಳ್ತಂಗಡಿ ಉರುವಾಲು- ಶ್ರೀ ಭಾರತೀ ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಕೀರ್ತಿ ಶೇಷ ಶ್ರೀ ಶಂಕರ ನಾರಾಯಣ ಭಟ್ಟ ಉಂಡೆಮನೆ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಲಾಯಿತು.
ಸೇವಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಪಾಲಕ, ಪೋಷಕರು, ಅಧ್ಯಾಪಕರು, ಊರ ಮಹನೀಯರು ಸೇರಿ ಅವರಿಗೆ ನುಡಿನಮನಗಳನ್ನು ಸಲ್ಲಿಸಿ ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದರು. ಶಾಲೆಗೆ ಅವರು ಸಲ್ಲಿಸಿದ ಅವಿಸ್ಮರಣೀಯ ಸೇವೆಯನ್ನು ಕೊಂಡಾಡಿದರು.
ಬಳಿಕ, ಅವರ ಹೆಸರಿನಲ್ಲಿ ದತ್ತಿನಿಧಿಯೊಂದನ್ನು ಸ್ಥಾಪಿಸಲು ನಿರ್ಣಯಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ