ಉಡುಪಿ ಉಪಕೇಂದ್ರ ಕೊಲ್ಲೂರಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Upayuktha
0


ಉಡುಪಿ:
ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಮಂಗಳವಾರ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಪಕೇಂದ್ರ ಕೊಲ್ಲೂರು ಎ ಇಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.


ಶಿಬಿರದಲ್ಲಿ 61 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 12 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 30 ಮಂದಿಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಮಾಡಲಾಗುವುದು.


ಶಿಬಿರದಲ್ಲಿ ನೇತ್ರತಜ್ಞೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಕೊಲ್ಲೂರು ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶೈಲೇಶ್ ಜೆ ರಾವ್, ನೇತ್ರಸಹಾಯಕಿ ಶುಕ್ಲತ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top