ಪರಿಸರ ಸಮತೋಲನ ಕಾಪಾಡಿ: ನ್ಯಾ. ಶಾಂತವೀರ ಶಿವಪ್ಪ

Upayuktha
0

 


ಉಡುಪಿ: ದೈನಂದಿನ ಜೀವನದಲ್ಲಿ ನಮ್ಮಸುತಮುತ್ತಲಿನ ಪರಿಸರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಮತೋಲನ ಕಾಪಾಡುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.


ಅವರು ನಿನ್ನೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ ಉಡುಪಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು.


ಪರಿಸರ ಜಾಗೃತಿಯ ಕಾರಣ ರಾಜ್ಯದಲ್ಲಿ  ಪ್ರತೀ ವರ್ಷ ಶೇ. 1.5 ರಷ್ಟುಅರಣ್ಯದ ಬೆಳವಣಿಗೆ ಆಗುತ್ತಿದ್ದು,ಹಸಿರು ವಲಯ ಹೆಚ್ಚಳವಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಡುವಾಗ ಒಂದೇ ರೀತಿಯ ಗಿಡಗಳನ್ನು ನೆಡದೇ ಆ ಪರಿಸರಕ್ಕೆ ಸೂಕ್ತವಾದ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು.ಅರಣ್ಯ ಪ್ರದಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯಲು ಸಾಧ್ಯ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಮಾಡಬೇಕುಎಂದರು.


ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಪರಿಸರ ನಾಶದಿಂದ ಮಾನವ ಹಾಗೂ ಪ್ರಾಣಿಸಂಕುಲದ ನಾಶವಾಗಲಿದ್ದು, ಅಂತರ್ಜಲ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರಅತ್ಯಂತ ಪ್ರಮುಖವಾದುದುಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಪ್ರಕೃತಿಯು ಮಾನವನ ಸಹಜ ಅವಶ್ಯಕತೆಗಳನ್ನು ಪೂರೈಸಲಿದೆ ಆದರೆ ದುರಾಸೆಗಳನ್ನಲ್ಲ. ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ವ್ಯವಸ್ಥಿತ ರೀತಿಯ ಯೋಜನೆಗಳನ್ನು ರೂಪಿಸಿ, ಅದರಂತೆ ಅನುಷ್ಠಾನಗೊಳಿಸಬೇಕು. ಉಡುಪಿ ಜಿಲ್ಲೆ ನೈಸರ್ಗಿಕ ಸಮೃದ್ದಿಯಿಂದ ಕೂಡಿದ ಜಿಲ್ಲೆಯಾಗಿದ್ದು ,ಜಿಲ್ಲೆಯಲ್ಲಿನ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಸ್ವಯಂ ಜಾಗೃತಿ ಮೂಡಬೇಕುಎಂದರು.


ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ,ಜಿಲ್ಲಾ ಪ್ರಾದೇಶಿಕ ಪರಿಸರಅಧಿಕಾರಿಡಾ.ಕೆ.ಎಂ. ರಾಜು ಮಾತನಾಡಿ, ಕೇಂದ್ರ ಮತ್ತುರಾಜ್ಯದಲ್ಲಿ ವಿಷನ್ ಲೈಪ್‍ಕಾರ್ಯಕ್ರಮ ನಡೆಯುತ್ತಿದ್ದು, ಅದರಂತೆ ನಮ್ಮಜೀವನ ಶೈಲಿಯಲ್ಲಿ ನೀರು, ವಿದ್ಯುತ್ ನ ಮಿತಬಳಕೆ, ಸಾವಯವಆಹಾರಉತ್ಪಾದನೆ ಮತ್ತು ಬಳಕೆಯ ಮೂಲಕ ಪರಿಸರ ಸಂರಕ್ಷಣೆ ಸಾಧ್ಯವಾಗಲಿದ್ದು, ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ನ ಕಡಿಮೆ ಬಳಕೆ , ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.


ಪರಿಸ ರದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಗಮನಾರ್ಹ ಚಟುವಟಿಕೆಗಳನ್ನು ಕೈಗೊಂಡಿರುವಕೋಟದ ಪಂಚವರ್ಣ ಯುವಕ ಮಂಡಲವನ್ನು ಅಭಿನಂದಿಸಲಾಯಿತು. ಪರಿಸರ ಸಂರಕ್ಷಣೆಕುರಿತಂತೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಸ್ಕೌಟ್ ಮತ್ತುಗೈಡ್ಸ್ ನ ಆಯುಕ್ತ ಡಾ.ವಿಜಯೇಂದ್ರ ವಸಂತರಾವ್ ಉಪಸ್ಥಿತರಿದ್ದರು.


ಪ್ಲಾಸ್ಟಿಕ್ ಮಾಲಿನ್ಯ ಮತ್ತು ಪರಿಹಾರಗಳ ಬಗ್ಗೆ ಜೋಸೆಫ್ ಎಂ ರೆಬೆಲ್ಲೂ ವಿಶೇಷ ಉಪನ್ಯಾಸ ನೀಡಿದರು.ಸಹಾಯಕ ಪರಿಸರ ಅಧಿಕಾರಿ ಅಮೃತಾ ವಂದಿಸಿದರು.


ಪರಿಸರ ದಿನಾಚರಣೆಯ ಅಂಗವಾಗಿ ಮಣಿಪಾಲದಎಂ.ಜೆ.ಸಿ.ಕಾಲೇಜು ಮೈದಾನದಿಂದ ರಜತಾದ್ರಿಯ ವಾಜಪೇಯಿ ಸಭಾಂಗಣದವರೆಗೆವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪರಿಸರಜಾಥಾ ನಡೆಯಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top