ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿಗೆ ಅರ್ಹ ಫಲಾನುಭವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾನಿಗಳ ಸಹಾಯಹಸ್ತದಿಂದ ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ಉತ್ತಮ ಸಾಧನೆ ಮಾಡಲು ಅಗತ್ಯ ಇರುವ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಡಾ. ಧಮ೯ಪಾಲನಾಥ ಸ್ವಾಮೀಜಿ ಸಿಎ ಶಾಂತರಾಮ್ ಶೆಟ್ಟಿ, ಮನಾಪ ಸದಸ್ಯೆ ಶ್ರೀಮತಿ ಸುಮ೦ಗಳ ರಾವ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ಶ್ರೀಪಾದ ತ೦ತ್ರಿ, ಕಾಲೇಜು ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಸಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ