ಕೆ.ಆರ್.ಪೇಟೆ (ಮಂಡ್ಯ): ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯ ನಿರತನಾಗಿದ್ದ ಭಾರತೀಯ ಸೇನೆಯ ವೀರಯೋಧ ಕೆ.ಪಿ. ಜನಾರ್ಧನ್ ಗೌಡ (30) ಕರ್ತವ್ಯ ನಿರತನಾಗಿದ್ದಾಗಲೇ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿರುವ ಯೋಧನ ಮನೆಗೆ ತೆರಳಿದ ಮಾಜಿ ಸಚಿವ ಡಾ. ನಾರಾಯಣಗೌಡರು ಮೃತ ಯೋಧನ ತಂದೆ, ತಾಯಿ ಹಾಗೂ ಪತ್ನಿ ರಂಜಿತಾ ಅವರಿಗೆ ಸಾಂತ್ವನ ಹೇಳಿ ಧನ ಸಹಾಯ ಮಾಡಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧನ ಸೇವೆಯನ್ನು ಸ್ಮರಿಸಿದರು.
ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇರುವ ಕಾರಣ ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚೆ ನಡೆಸಿ ಕೇಂದ್ರ ಸರ್ಕಾರಿ ಸ್ವಾಮ್ಯದ ಇಲಾಖೆಯೊಂದರಲ್ಲಿ ಸೂಕ್ತ ಉದ್ಯೋಗವನ್ನು ದೊರಕಿಸಿಕೊಡುವ ಭರವಸೆಯನ್ನು ನೀಡಿದರು.
ಕರ್ತವ್ಯ ನಿರತನಾಗಿದ್ದಾಗಲೇ ಕೆಪಿ ಜನಾರ್ದನ ಗೌಡ ಅವರು ಕರ್ತವ್ಯ ನಿರತರಾಗಿದ್ದಾಗಲೇ ಅನಾರೋಗ್ಯದಿಂದ ಮೃತರಾಗಿದ್ದಾರೆ. ಮೃತ ಯೋಧ ಜನಾರ್ಧನ ಗೌಡ ಅವರ ಪತ್ನಿ ರಂಜಿತ ಪದವಿ ವ್ಯಾಸಂಗವನ್ನು ಮಾಡಿದ್ದು ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಕೇಂದ್ರ ಸರ್ಕಾರದ ವತಿಯಿಂದ ಸೂಕ್ತ ಉದ್ಯೋಗವನ್ನು ದೊರಕಿಸಿಕೊಡಲು ಮಾಜಿ ಸಚಿವ ನಾರಾಯಣಗೌಡರು ಮೃತ ಯೋಧನ ಕುಟುಂಬ ವರ್ಗದವರಿಗೆ ಭರವಸೆ ನೀಡಿದರು.
ಮೃತ ಯೋಧನ ಕುಟುಂಬದ ಸಮಸ್ಯೆಗಳನ್ನು ಆಲಿಸಿ ಕುಟುಂಬ ವರ್ಗದವರಿಗೆ ಆತ್ಮವಿಶ್ವಾಸ ತುಂಬಿದ ಮಾಜಿ ಸಚಿವ ನಾರಾಯಣಗೌಡ ನಿಮ್ಮ ಮನೆಯ ಸಮಸ್ಯೆಗಳು ನನ್ನ ಸಮಸ್ಯೆಗಳು; ನಿಮ್ಮ ಕುಟುಂಬದ ಸಮಸ್ಯೆಗಳ ನಿವಾರಣೆಗೆ ನಾನು ನನ್ನ ಕೈಲಾದ ಸಹಕಾರವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಆತ್ಮವಿಶ್ವಾಸವನ್ನು ತುಂಬಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಿಕ್ಕೇರಿ ಕೆಎಸ್ ಪ್ರಭಾಕರ್, ಶೀಳನೆರೆ ಅಂಬರೀಶ್, ಮಂಡ್ಯ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಕೆ.ಜಿ ತಮ್ಮಣ್ಣ, ಪುರಸಭಾ ಮಾಜಿ ಸದಸ್ಯ ಕೆ.ಆರ್ ನೀಲಕಂಠ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬೂಕನಕೆರೆ ಜವರಾಯಿಗೌಡ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಡ್ಡರಹಳ್ಳಿ ರವಿ, ಮುಖಂಡರಾದ ಮಾದಾಪುರ ಶೇಖರ್, ರಾಜು, ಶೆಟ್ಟಿಹಳ್ಳಿ ಕೃಷ್ಣೇಗೌಡ, ಕಿಕ್ಕೇರಿ ಬಲರಾಮ್, ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ