ಮಲ್ಲೇಶ್ವರ: 30ರಂದು ಹವ್ಯಕ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ

Upayuktha
0


ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭೆಯ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರವು ಜುಲೈ 30ರಂದು ಭಾನುವಾರ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆಯಲಿದೆ.


ಮಾಜಿ ಸಚಿವರು ಹಾಗೂ ಶಾಸಕರಾದ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಅನೇಕ ಖ್ಯಾತ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ಉಚಿತ ಸಲಹೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ.


ಶ್ರೀಭಾರತೀ ಆರೋಗ್ಯಧಾಮ, ಕರ್ನಾಟಕ ಕ್ಯಾನ್ಸರ್ ಸೊಸೈಟಿ, ಸುನೇತ್ರ  ಕಣ್ಣಿನ ಆಸ್ಪತ್ರೆ, ಶ್ರೀ ರಕ್ಷಾ ಲ್ಯಾಬ್ಸ್, ಹಾಗೂ ಆಸ್ಟರ್ ಆರ್.ವಿ ಆಸ್ಪತ್ರೆಗಳ ಸಹಯೋಗದೊಂದಿಗೆ ವೈದ್ಯಕೀಯ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಎಲ್ಲ ರೀತಿಯ ರೋಗಗಳಿಗೆ ಉಚಿತ ಸಲಹೆ, ಚಿಕಿತ್ಸೆ ನೀಡಲಾಗುವುದು. ರಕ್ತದ ಪರೀಕ್ಷೆ, ಸಕ್ಕರೆ ಕಾಯಿಲೆ, ಇಕೋ ಸ್ಕ್ಯಾನ್, ಇಸಿಜಿ, ಬಿಪಿ, ಕಣ್ಣು, ಕಿವಿ ಮೂಗು ಗಂಟಲು ಬೇನೆ, ಕ್ಯಾನ್ಸರ್, ಥೈರಾಯ್ಡ್, ಸಂದಿವಾತ, ಮುಟ್ಟಿನ ತೊಂದರೆ, ಚರ್ಮ ಕಾಯಿಲೆ, ದಮ್ಮು, ಕೆಮ್ಮು, ಅಲರ್ಜಿ, ಮುಂತಾದವುಗಳನ್ನು ಪರೀಕ್ಷಿಸಲಾಗುತ್ತದೆ.


ಸಾರ್ವಜನಿಕರಿಗೆ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶವಿದ್ದು, ಎಲ್ಲಾ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹವ್ಯಕ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ್ ಸಂಪ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಚಾಲಕರಾದ ಡಾ. ಶ್ರೀಪಾದ ಹೆಗಡೆಯವರನ್ನು (9448018654) ಹಾಗೂ ಮಹಾಸಭೆಯ ಕಾರ್ಯಾಲಯವನ್ನು (080 2334 8193) ಸಂಪರ್ಕಿಸಬಹುದು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top