ಮೂಡುಬಿದಿರೆ: ಜುಲೈ ತಿಂಗಳ 23 ರ ಆದಿತ್ಯವಾರದಂದು ತುಳುಕೂಟ ಬೆದ್ರ ಇದರ ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತುಳುಕೂಟದ ಮಾಸಿಕ ಸಭೆಯಲ್ಲಿ ನಿರ್ಧಾರಿಸಲಾಗಿದೆ.
ಮುಂಜಾನೆ ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿಶೇಷ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಆಟಿ ತಿಂಗಳ ವಿಶೇಷತೆಯ ಭೋಜನ ವ್ಯವಸ್ಥೆಯು ಇರುವುದಾಗಿ ತುಳುಕೂಟದ ಅಧ್ಯಕ್ಷರಾದ ಶ್ರೀ ಧನಕೀರ್ತಿ ಬಲಿಪ ಅವರು ತಿಳಿಸಿರುತ್ತಾರೆ. ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಹಾಸ ದೇವಾಡಿಗ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಶ್ರೀ ಸದನಾಂದ ನಾರಾವಿ ನಿರೂಪಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ