ಲೆ.ಭಾಮಿ ಅತುಲ್ ಶೆಣೈ ಅವರಿಗೆ ಮುಖ್ಯಮಂತ್ರಿ ಅವರಿಂದ ಪ್ರಶಂಸನಾ ಪತ್ರ

Chandrashekhara Kulamarva
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ರಾಷ್ಟೀಯ ಸೇನಾ ಯೋಜನೆಯ (ಎನ್‍ಸಿಸಿ) ಯ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರಿಗೆ ಎನ್‍ಸಿಸಿಯಲ್ಲಿ  ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರದ  ಮುಖ್ಯಮಂತ್ರಿಯಿಂದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು.


ಮಡಿಕೇರಿ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್  ಝೆಡ್.ಜಿ.ಅರ್ಹನ ಹಾಗೂ ಆಡಳಿತಾಧಿಕಾರಿ ಕರ್ನಲ್ ವಿ ಡಿ ಚಾಕೋ ಅವರು ಈ ಗೌರವ ಪತ್ರವನ್ನು  ಮಡಿಕೇರಿ ಬೆಟಾಲಿಯನ್ ನಲ್ಲಿ ನೀಡಿ ಗೌರವಿಸಲಾಯಿತು.


ಭಾಮಿ ಅತುಲ್ ಶೆಣೈ ಅವರು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ


ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ಉಪನ್ಯಾಸಕೇತರ ವರ್ಗದವರು ಶುಭ ಹಾರೈಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
To Top