2022-23ನೇ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜ್‌ಗೆ 2 ರ್‍ಯಾಂಕ್‍

Upayuktha
0


ಪುತ್ತೂರು:
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2022-23ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‍ಗಳನ್ನು ಪಡೆದುಕೊಂಡಿದ್ದಾರೆ. 


ಕಾಲೇಜಿನ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಜಾಗೃತಿ.ಜೆ.ನಾಯಕ್ 9.59 ಸಿಜಿಪಿಎ ಅಂಕಗಳೊಂದಿಗೆ 4ನೇ ರ್‍ಯಾಂಕ್ ಹಾಗೂ ದಿವ್ಯಶ್ರೀ.ಎಸ್ 9.58 ಸಿಜಿಪಿಎ ಅಂಕಗಳೊಂದಿಗೆ ಏಳನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ.


ಜಾಗೃತಿ.ಜೆ.ನಾಯಕ್ ಅವರು ಪುತ್ತೂರಿನ ದರ್ಭೆಯ ಜ್ಯೋತಿ ನಾಯಕ್ ಹಾಗೂ ಜಗನ್ನಾತ್ ನಾಯಕ್.ಎಂ ಅವರ ಪುತ್ರಿ. ದಿವ್ಯಶ್ರೀ.ಎಸ್ ಅವರು ಚಿಕ್ಕಪುತ್ತೂರಿನ ಪೊನ್ನಿ.ಎಸ್ ಹಾಗೂ ಎಸ್.ಶಿವಕುಮಾರ್ ಅವರ ಪುತ್ರಿ.


ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top