ಮಣಿಪಾಲ: ಸಮುದಾಯದ ಅಭಿವೃದ್ದಿಗಾಗಿ ಭಾರತದ್ಯಂತ ಸಮುದಾಯ ಬಾನುಲಿಗಳು ಕಾರ್ಯನಿರ್ವಾಹಿಸುತ್ತಿವೆ. ಭಾರತದಲ್ಲಿ ಸುಮಾರು 440 ಸಮುದಾಯ ಬಾನುಲಿಗಳಿದ್ದು, ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ನ 2023-'25 ನೇ ಸಾಲಿನ ಚುನಾವಣೆಯಲ್ಲಿ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಮೈರಾಡ ಸಂಸ್ಥೆ ನಡೆಸುತ್ತಿರುವ 'ನಮ್ಮ ಧ್ವನಿ' ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಅಧಿಕಾರಿ ಶಿವಶಂಕರಸ್ವಾಮಿ ಅವರು ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ನ ದಕ್ಷಿಣ ವಲಯದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯದಿಂದ ಸ್ಪರ್ಧಿಸಿದ್ದರು. ಪ್ರಸ್ತುತ ಇವರು ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ನ ಕರ್ನಾಟಕ ಶಾಖೆಯ ಗೌರವಾಧ್ಯಕ್ಷರೂ ಆಗಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ